Homeಮುಖಪುಟಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

- Advertisement -
- Advertisement -

ನನ್ನ ಮಾತುಗಳನ್ನ ಶೇಕ್ಸ್‌ಪಿಯರ್‌ನ ಜೂಲಿಯಸ್ ಸೀಜರ್ ದುರಂತ ನಾಟಕದಿಂದ ಆರಂಭಿಸುತ್ತೇನೆ. ಸೀಜರ್ ಜಗತ್ತನ್ನೇ ಗೆಲ್ಲುವ ತಾಕತ್ತಿದ್ದ ಯುದ್ಧ ನಿಪುಣ. ರೋಮ್ ಸಾಮ್ರಾಜ್ಯದ ಸೈನ್ಯದ ಮುಖ್ಯಸ್ಥ, ಸೇನಾಧಿಕಾರಿ, ರೋಮ್ ದೇಶವನ್ನು ಶ್ರೀಮಂತಗೊಳಿಸಿದವನು.

ಇವನ ಮಹತ್ವಾಕಾಂಕ್ಷೆಗೆ ಅವನ ಸುತ್ತಲಿನ ಗೆಳೆಯರೇ ಭೀತಿಗೊಳಗಾಗುತ್ತಾರೆ. ಸೀಜರ್‌ನನ್ನು ಮುಗಿಸಲು ತವಕಿಸುತ್ತಾರೆ. ಆದರೆ ಯಾರಿಗೂ ಮುಟ್ಟಲು ಎದೆಗಾರಿಕೆ ಇರಲಿಲ್ಲ. ಕೊನೆಗವರು ಹುಡುಕುವುದು ಸೀಜರ್‌ನ ಪರಮಾಪ್ತ ನಂಬಿಕಸ್ಥ ಬ್ರೂಟಸ್‌ನನ್ನು.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ

ಬ್ರೂಟಸ್ ಅಪ್ರತಿಮ ದೇಶಭಕ್ತ ಎಂದೂ ಕೂಡ ಹೆಸರು ಪಡೆದವನು. ಬ್ರೂಟಸ್, ಸೀಜರ್‌ನ ಹೃದಯಕ್ಕೆ ಚೂರಿ ಹಾಕುತ್ತಾನೆ. ದೇಶಭಕ್ತ ಎಂದು ಬ್ರಾಂಡ್ ಆದವರು ಏನುಬೇಕಾದರೂ ಮಾಡಿ ದಕ್ಕಿಸಿಕೊಳ್ಳಬಹುದೆಂದು ಕಾಣುತ್ತದೆ! ಆ ಸೀಜರ್‌ನ ಹೆಣದ ಮುಂದೆ ಮಾರ್ಕ್ ಆಂಟ್ಯೋನಿ ‘The most unkindest cut of all’ ಎಂದು ಉದ್ಗಾರ ಮಾಡುತ್ತಾನೆ.

ವ್ಯಾಕರಣದ ಪ್ರಕಾರ, The most ಮತ್ತು Unkindest – ಈ ಎರಡೂ ಅತಿಶಯೋಕ್ತಿಗಳು ಒಂದೇ ವಾಕ್ಯದಲ್ಲಿ ಬರಬಾರದು. ಆದರೆ ಶೇಕ್ಸ್‌ಪಿಯರ್‌ ನಂಬಿಕಸ್ಥನೇ ಕೊಲೆ ಮಾಡುವ ಈ ಘಾತುಕ ಕೃತ್ಯವನ್ನು ಹೇಗಿದೆಯೋ ಹಾಗೆಯೇ ಕಟ್ಟಿಕೊಡಲು ವ್ಯಾಕರಣವನ್ನೇ ಮುರಿದು ಕಟ್ಟುತ್ತಾನೆ. ಈ ದುರಂತ ನಾಟಕವನ್ನು ಇಲ್ಲಿಗೇ ಬಿಡೋಣ. ಯಥಾವತ್ತಾಗಿ ಇಂದಿಗೆ ಇಲ್ಲಿಗೆ ಅಳವಡಿಸಿಕೊಳ್ಳಲೂ ಆಗದು. ಆದರೆ ನಂಬಿಕಸ್ಥನೇ ಕೊಲೆ ಮಾಡಿದ್ದಕ್ಕೆ ಅಭಿವ್ಯಕ್ತಿಗೊಂಡ ‘The most …. all’ ಎಂಬ ಮಾತು? ಇಂದು ಇದು ಭಾರತದಲ್ಲಿ ಜರುಗುತ್ತಿಲ್ಲವೇ? ಹೌದು ಎಂದೆನ್ನಿಸಿಬಿಡುತ್ತದೆ.

ಈಗ ಕರ್ನಾಟಕ ರಾಜ್ಯ ಸರ್ಕಾರ ಜೂನ್ 2020 ರಂದು ಭೂಸುಧಾರಣೆ ಕಾಯ್ದೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಕೂಡ ರೈತರ ಏಳ್ಗೆಗಾಗಿ ಎನ್ನುತ್ತಲೇ ಅವರ ಬದುಕನ್ನೇ ಎತ್ತಂಗಡಿಯಾಗಿಸುತ್ತದೆ. ಇದರ ಮೂಲ ಹುಡುಕಿದರೆ ಇದರ ಕಾರಸ್ಥಾನ ತಮಗೆಲ್ಲಾ ಗೊತ್ತಿರಬಹುದು. ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರದ ಪ್ರಗತಿಪರವಾದ 2013 ರ ಭೂಸ್ವಾಧೀನ ಕಾಯ್ದೆಗೆ 2015 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸುಗ್ರೀವಾಜ್ಞೆ ತಂದು ಭೂಸುಧಾರಣೆಯ ಬುಡವನ್ನೇ ಕತ್ತರಿಸಿ ಧ್ವಂಸ ಮಾಡಲು ಹವಣಿಸಿತ್ತು.

ಇದರೂ ಓದ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ಬ್ರಿಟಿಷ್ ಕಾಲದ 1894 ರ ಕಾಯ್ದೆಯಲ್ಲಿ ಭೂಮಿಯ ಮಾಲೀಕರಿಗೆ ಆಕ್ಷೇಪ ಎತ್ತಲು ಅವಕಾಶವಾದರೂ ಇತ್ತು. ಆದರೆ ಆ ಬಿಜೆಪಿ ಸುಗ್ರೀವಾಜ್ಞೆ ಅದನ್ನೂ ಕಿತ್ತುಕೊಂಡಿತ್ತು. ಇದನ್ನು ಎಂ.ಲಕ್ಷ್ಮಣ ಅವರು 8 ಪುಟಗಳ ಒಂದು ಫೋಲ್ಡರ್‌‌ನಲ್ಲಿ ಬಿಜೆಪಿಯ ಅಮಾನುಷ ಸುಗ್ರೀವಾಜ್ಞೆಯ ವಿವರಗಳನ್ನು ಬಿಚ್ಚಿಡುತ್ತಾರೆ. ಆ ಸುಗ್ರೀವಾಜ್ಞೆಯ ವಿರುದ್ಧ ಆಗ ಭುಗಿಲೆದ್ದ ಪ್ರತಿಭಟನೆಗಳು ಬಿಜೆಪಿ ಸುಗ್ರೀವಾಜ್ಞೆಯನ್ನು ತಡೆಗಟ್ಟುತ್ತವೆ. ಆಗ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಆ ಸುಗ್ರೀವಾಜ್ಞೆಯನ್ನೇನೋ ಹಿಂತೆಗೆದುಕೊಳ್ಳುತ್ತದೆ. ನೆನಪಿರಲಿ, ಅದನ್ನು ರದ್ದು ಮಾಡಿಲ್ಲ! ಬಹುಶಃ ಹೊಂಚು ಹಾಕುತ್ತಿದೆ.

ಇದರ ವಾಸನೆ ಹಿಡಿದು ನೋಡುವುದಾದರೆ, ಟೆಸ್ಟಿಂಗ್ ಡೋಸ್ ಎಂಬಂತೆ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಈ ತಿದ್ದುಪಡಿ ಸುಗ್ರೀವಾಜ್ಞೆ ತಂದಿರಬಹುದು ಅನ್ನಿಸುತ್ತದೆ. ರೈತಾಪಿ ಹಿತ ಕಾಪಾಡುವ ದೇವರಾಜ್ ಅರಸು ಅವರ 1974 ರ ಕಾಯ್ದೆಗಳನ್ನೆಲ್ಲಾ ನಿರ್ದಯವಾಗಿ ಈ ಸುಗ್ರೀವಾಜ್ಞೆ ಕತ್ತರಿಸಿ ಹಾಕಿದೆ.

ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮನಮುಟ್ಟುವಂತೆ ಮಾತಾಡಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಂಭೀರವಾದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಹಾಗೆ ಶಿವಸುಂದರ್ ಚಿಕಿತ್ಸಕ ನೋಟ ಬೀರಿದ್ದಾರೆ. ಹೆಚ್ಚು ವಿವರಗಳಿಗೆ ನಾನು ಹೋಗುವುದಿಲ್ಲ. ಎಷ್ಟೂಂತ, ಯಾವು ಯಾವುದು ಅಂತ ಹೇಳುವುದು?

ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

‘ಕೊರೋನಾ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ’ ಎನ್ನುವ ಅರ್ಥಸಚಿವರನ್ನು ಭಾರತ ಪಡೆದಿದೆ! ಭಾರತದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್‌ಟಿ ತಂದು ದೆವ್ವದ ಆಟ ಆಡಿದವರು ಯಾರು? ಜನರಿಗೆ ಕನಸು ಕಾಣಿಸಿ ನೋಟ್‌ಬ್ಯಾನ್ ತಂದು ಭಾರತದ ಬದುಕನ್ನ ದುಃಸ್ವಪ್ನ ಮಾಡಿದ ಭೂತದ ಆಟ ಆಡಿದವರು ಯಾರು? ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

ಯಾಕೆಂದರೆ ಕೊರೋನಾ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದನ್ನು ನೋಡುತ್ತಿದ್ದರೆ ಇನ್ನೇನು ಹೇಳಬೇಕು? ‘The most unkindest cut of all’ ಎಂದೇ ಅನ್ನಿಸುತ್ತದೆ.

ಇಂತಹ ಧಾರುಣ ಪರಿಸ್ಥಿತಿಯಲ್ಲೂ, ಎಷ್ಟೆಂದರೆ, ಬಾಲಾಕೋಟ್ ವಾಯುದಾಳಿಯ ಸಂದರ್ಭದಲ್ಲಿ “…ಮೋಡಗಳಿವೆ, ಮಳೆ ಬರ‍್ತಾ ಇದೆ ಅಂದರೆ ನಾವು ರಾಡಾರ್‌ನಿಂದ ಬಚಾವ್ ಆಗಬಹುದು. ದಾಳಿ ಮಾಡಿ” ಎಂದು ದೇಶದ ಚುಕ್ಕಾಣಿ ಹಿಡಿದ ವ್ಯಕ್ತಿ ಸ್ಪ್ಯಾನಿಷ್ ಲೇಖಕ ಸರ್ವಂಟೀಸ್‌ನ ಕಾದಂಬರಿಯ ನಾಯಕ ಡಾನ್‌ಕ್ವಿಕ್ಯಾಟ್‌ನ ತದ್ರೂಪಿಯಂತೆ ವರ್ತಿಸುತ್ತಿದ್ದರೂ ಇದನ್ನೆಲ್ಲಾ ನೋಡಿಯೂ ಭ್ರಮಾಲೋಕದಲ್ಲಿ ಬದುಕುತ್ತಿರುವುದೇನೋ ಎಂಬಂತಿರುವ ಭಾರತಕ್ಕೆ, ಇಂದು ಸೆಪ್ಟೆಂಬರ್ 5, 2020 ಸುಮಾರು 500 ರಷ್ಟು ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂದು ಒಕ್ಕೊರಲಿನಿಂದ ಕೂಗಿ ಹೇಳುತ್ತಿವೆ.

ಅವರು ಮಹಿಳೆಯರ ಸಮಸ್ಯೆಗಳನ್ನು ಮಾತ್ರ ಎತ್ತುತ್ತಿಲ್ಲ; ರೈತ, ದಲಿತ, ಕಾರ್ಮಿಕ, ದಿನಗೂಲಿ, ವಲಸೆ ಕಾರ್ಮಿಕರು, ಪೌರ ಕಾರ್ಮಿಕರು, ಪ್ರಕೃತಿ-ಪರಿಸರ, ಪೌರತ್ವದ ಪ್ರಶ್ನೆ, ರಾಜಕೀಯ ಕೈದು, ಮಾಹಿತಿ ಹಕ್ಕು ಕಾಯ್ದೆ… ಇತ್ಯಾದಿ ಹೀಗೆ ಎಲ್ಲವನ್ನೂ ಕೂಡಿಸಿ ಹೇಳುತ್ತಾ “ನಮ್ಮ ಸಂವಿಧಾನ ಮತ್ತು ಪ್ರಜಾತಂತ್ರವನ್ನು ರಕ್ಷಿಸಿಕೊಳ್ಳಲು ನಾವು ಒಂದುಗೂಡುತ್ತಿದ್ದೇವೆ” ಎಂದು ಕೂಗಿ ಹೇಳುತ್ತಿದ್ದಾರೆ. ಒಂಟಿ ಸಂಘಟನೆಗಳಾದ ನಾವೂ ಕೂಡ ಒಕ್ಕೂಟವಾಗಬೇಕಾಗಿದೆ. ಎಲ್ಲರೂ ಸಮುದಾಯದೊಳಗೆ ಕರಗಿ ಹೋಗಬೇಕಾಗಿದೆ.

ಸಮುದಾಯದೊಳಗಿಂದ ಹೊಸ ಮಾತು, ಹೊಸ ನುಡಿಗಟ್ಟು, ಹೊಸ ನಡೆ ಹುಟ್ಟಬೇಕಾಗಿದೆ. ಅದು ಇದೀಗ ಚಿಗುರೊಡೆಯುತ್ತಿದೆ ಎಂದೆನಿಸುತ್ತಿದೆ.

ಕೃಪೆ: ನಮ್ಮ ಬನವಾಸಿ


ಇದನ್ನೂ ಓದಿ: ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...