Homeಮುಖಪುಟಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

- Advertisement -
- Advertisement -

ನನ್ನ ಮಾತುಗಳನ್ನ ಶೇಕ್ಸ್‌ಪಿಯರ್‌ನ ಜೂಲಿಯಸ್ ಸೀಜರ್ ದುರಂತ ನಾಟಕದಿಂದ ಆರಂಭಿಸುತ್ತೇನೆ. ಸೀಜರ್ ಜಗತ್ತನ್ನೇ ಗೆಲ್ಲುವ ತಾಕತ್ತಿದ್ದ ಯುದ್ಧ ನಿಪುಣ. ರೋಮ್ ಸಾಮ್ರಾಜ್ಯದ ಸೈನ್ಯದ ಮುಖ್ಯಸ್ಥ, ಸೇನಾಧಿಕಾರಿ, ರೋಮ್ ದೇಶವನ್ನು ಶ್ರೀಮಂತಗೊಳಿಸಿದವನು.

ಇವನ ಮಹತ್ವಾಕಾಂಕ್ಷೆಗೆ ಅವನ ಸುತ್ತಲಿನ ಗೆಳೆಯರೇ ಭೀತಿಗೊಳಗಾಗುತ್ತಾರೆ. ಸೀಜರ್‌ನನ್ನು ಮುಗಿಸಲು ತವಕಿಸುತ್ತಾರೆ. ಆದರೆ ಯಾರಿಗೂ ಮುಟ್ಟಲು ಎದೆಗಾರಿಕೆ ಇರಲಿಲ್ಲ. ಕೊನೆಗವರು ಹುಡುಕುವುದು ಸೀಜರ್‌ನ ಪರಮಾಪ್ತ ನಂಬಿಕಸ್ಥ ಬ್ರೂಟಸ್‌ನನ್ನು.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ

ಬ್ರೂಟಸ್ ಅಪ್ರತಿಮ ದೇಶಭಕ್ತ ಎಂದೂ ಕೂಡ ಹೆಸರು ಪಡೆದವನು. ಬ್ರೂಟಸ್, ಸೀಜರ್‌ನ ಹೃದಯಕ್ಕೆ ಚೂರಿ ಹಾಕುತ್ತಾನೆ. ದೇಶಭಕ್ತ ಎಂದು ಬ್ರಾಂಡ್ ಆದವರು ಏನುಬೇಕಾದರೂ ಮಾಡಿ ದಕ್ಕಿಸಿಕೊಳ್ಳಬಹುದೆಂದು ಕಾಣುತ್ತದೆ! ಆ ಸೀಜರ್‌ನ ಹೆಣದ ಮುಂದೆ ಮಾರ್ಕ್ ಆಂಟ್ಯೋನಿ ‘The most unkindest cut of all’ ಎಂದು ಉದ್ಗಾರ ಮಾಡುತ್ತಾನೆ.

ವ್ಯಾಕರಣದ ಪ್ರಕಾರ, The most ಮತ್ತು Unkindest – ಈ ಎರಡೂ ಅತಿಶಯೋಕ್ತಿಗಳು ಒಂದೇ ವಾಕ್ಯದಲ್ಲಿ ಬರಬಾರದು. ಆದರೆ ಶೇಕ್ಸ್‌ಪಿಯರ್‌ ನಂಬಿಕಸ್ಥನೇ ಕೊಲೆ ಮಾಡುವ ಈ ಘಾತುಕ ಕೃತ್ಯವನ್ನು ಹೇಗಿದೆಯೋ ಹಾಗೆಯೇ ಕಟ್ಟಿಕೊಡಲು ವ್ಯಾಕರಣವನ್ನೇ ಮುರಿದು ಕಟ್ಟುತ್ತಾನೆ. ಈ ದುರಂತ ನಾಟಕವನ್ನು ಇಲ್ಲಿಗೇ ಬಿಡೋಣ. ಯಥಾವತ್ತಾಗಿ ಇಂದಿಗೆ ಇಲ್ಲಿಗೆ ಅಳವಡಿಸಿಕೊಳ್ಳಲೂ ಆಗದು. ಆದರೆ ನಂಬಿಕಸ್ಥನೇ ಕೊಲೆ ಮಾಡಿದ್ದಕ್ಕೆ ಅಭಿವ್ಯಕ್ತಿಗೊಂಡ ‘The most …. all’ ಎಂಬ ಮಾತು? ಇಂದು ಇದು ಭಾರತದಲ್ಲಿ ಜರುಗುತ್ತಿಲ್ಲವೇ? ಹೌದು ಎಂದೆನ್ನಿಸಿಬಿಡುತ್ತದೆ.

ಈಗ ಕರ್ನಾಟಕ ರಾಜ್ಯ ಸರ್ಕಾರ ಜೂನ್ 2020 ರಂದು ಭೂಸುಧಾರಣೆ ಕಾಯ್ದೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಕೂಡ ರೈತರ ಏಳ್ಗೆಗಾಗಿ ಎನ್ನುತ್ತಲೇ ಅವರ ಬದುಕನ್ನೇ ಎತ್ತಂಗಡಿಯಾಗಿಸುತ್ತದೆ. ಇದರ ಮೂಲ ಹುಡುಕಿದರೆ ಇದರ ಕಾರಸ್ಥಾನ ತಮಗೆಲ್ಲಾ ಗೊತ್ತಿರಬಹುದು. ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರದ ಪ್ರಗತಿಪರವಾದ 2013 ರ ಭೂಸ್ವಾಧೀನ ಕಾಯ್ದೆಗೆ 2015 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸುಗ್ರೀವಾಜ್ಞೆ ತಂದು ಭೂಸುಧಾರಣೆಯ ಬುಡವನ್ನೇ ಕತ್ತರಿಸಿ ಧ್ವಂಸ ಮಾಡಲು ಹವಣಿಸಿತ್ತು.

ಇದರೂ ಓದ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ಬ್ರಿಟಿಷ್ ಕಾಲದ 1894 ರ ಕಾಯ್ದೆಯಲ್ಲಿ ಭೂಮಿಯ ಮಾಲೀಕರಿಗೆ ಆಕ್ಷೇಪ ಎತ್ತಲು ಅವಕಾಶವಾದರೂ ಇತ್ತು. ಆದರೆ ಆ ಬಿಜೆಪಿ ಸುಗ್ರೀವಾಜ್ಞೆ ಅದನ್ನೂ ಕಿತ್ತುಕೊಂಡಿತ್ತು. ಇದನ್ನು ಎಂ.ಲಕ್ಷ್ಮಣ ಅವರು 8 ಪುಟಗಳ ಒಂದು ಫೋಲ್ಡರ್‌‌ನಲ್ಲಿ ಬಿಜೆಪಿಯ ಅಮಾನುಷ ಸುಗ್ರೀವಾಜ್ಞೆಯ ವಿವರಗಳನ್ನು ಬಿಚ್ಚಿಡುತ್ತಾರೆ. ಆ ಸುಗ್ರೀವಾಜ್ಞೆಯ ವಿರುದ್ಧ ಆಗ ಭುಗಿಲೆದ್ದ ಪ್ರತಿಭಟನೆಗಳು ಬಿಜೆಪಿ ಸುಗ್ರೀವಾಜ್ಞೆಯನ್ನು ತಡೆಗಟ್ಟುತ್ತವೆ. ಆಗ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಆ ಸುಗ್ರೀವಾಜ್ಞೆಯನ್ನೇನೋ ಹಿಂತೆಗೆದುಕೊಳ್ಳುತ್ತದೆ. ನೆನಪಿರಲಿ, ಅದನ್ನು ರದ್ದು ಮಾಡಿಲ್ಲ! ಬಹುಶಃ ಹೊಂಚು ಹಾಕುತ್ತಿದೆ.

ಇದರ ವಾಸನೆ ಹಿಡಿದು ನೋಡುವುದಾದರೆ, ಟೆಸ್ಟಿಂಗ್ ಡೋಸ್ ಎಂಬಂತೆ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಈ ತಿದ್ದುಪಡಿ ಸುಗ್ರೀವಾಜ್ಞೆ ತಂದಿರಬಹುದು ಅನ್ನಿಸುತ್ತದೆ. ರೈತಾಪಿ ಹಿತ ಕಾಪಾಡುವ ದೇವರಾಜ್ ಅರಸು ಅವರ 1974 ರ ಕಾಯ್ದೆಗಳನ್ನೆಲ್ಲಾ ನಿರ್ದಯವಾಗಿ ಈ ಸುಗ್ರೀವಾಜ್ಞೆ ಕತ್ತರಿಸಿ ಹಾಕಿದೆ.

ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮನಮುಟ್ಟುವಂತೆ ಮಾತಾಡಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಂಭೀರವಾದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಹಾಗೆ ಶಿವಸುಂದರ್ ಚಿಕಿತ್ಸಕ ನೋಟ ಬೀರಿದ್ದಾರೆ. ಹೆಚ್ಚು ವಿವರಗಳಿಗೆ ನಾನು ಹೋಗುವುದಿಲ್ಲ. ಎಷ್ಟೂಂತ, ಯಾವು ಯಾವುದು ಅಂತ ಹೇಳುವುದು?

ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

‘ಕೊರೋನಾ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ’ ಎನ್ನುವ ಅರ್ಥಸಚಿವರನ್ನು ಭಾರತ ಪಡೆದಿದೆ! ಭಾರತದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್‌ಟಿ ತಂದು ದೆವ್ವದ ಆಟ ಆಡಿದವರು ಯಾರು? ಜನರಿಗೆ ಕನಸು ಕಾಣಿಸಿ ನೋಟ್‌ಬ್ಯಾನ್ ತಂದು ಭಾರತದ ಬದುಕನ್ನ ದುಃಸ್ವಪ್ನ ಮಾಡಿದ ಭೂತದ ಆಟ ಆಡಿದವರು ಯಾರು? ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

ಯಾಕೆಂದರೆ ಕೊರೋನಾ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದನ್ನು ನೋಡುತ್ತಿದ್ದರೆ ಇನ್ನೇನು ಹೇಳಬೇಕು? ‘The most unkindest cut of all’ ಎಂದೇ ಅನ್ನಿಸುತ್ತದೆ.

ಇಂತಹ ಧಾರುಣ ಪರಿಸ್ಥಿತಿಯಲ್ಲೂ, ಎಷ್ಟೆಂದರೆ, ಬಾಲಾಕೋಟ್ ವಾಯುದಾಳಿಯ ಸಂದರ್ಭದಲ್ಲಿ “…ಮೋಡಗಳಿವೆ, ಮಳೆ ಬರ‍್ತಾ ಇದೆ ಅಂದರೆ ನಾವು ರಾಡಾರ್‌ನಿಂದ ಬಚಾವ್ ಆಗಬಹುದು. ದಾಳಿ ಮಾಡಿ” ಎಂದು ದೇಶದ ಚುಕ್ಕಾಣಿ ಹಿಡಿದ ವ್ಯಕ್ತಿ ಸ್ಪ್ಯಾನಿಷ್ ಲೇಖಕ ಸರ್ವಂಟೀಸ್‌ನ ಕಾದಂಬರಿಯ ನಾಯಕ ಡಾನ್‌ಕ್ವಿಕ್ಯಾಟ್‌ನ ತದ್ರೂಪಿಯಂತೆ ವರ್ತಿಸುತ್ತಿದ್ದರೂ ಇದನ್ನೆಲ್ಲಾ ನೋಡಿಯೂ ಭ್ರಮಾಲೋಕದಲ್ಲಿ ಬದುಕುತ್ತಿರುವುದೇನೋ ಎಂಬಂತಿರುವ ಭಾರತಕ್ಕೆ, ಇಂದು ಸೆಪ್ಟೆಂಬರ್ 5, 2020 ಸುಮಾರು 500 ರಷ್ಟು ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂದು ಒಕ್ಕೊರಲಿನಿಂದ ಕೂಗಿ ಹೇಳುತ್ತಿವೆ.

ಅವರು ಮಹಿಳೆಯರ ಸಮಸ್ಯೆಗಳನ್ನು ಮಾತ್ರ ಎತ್ತುತ್ತಿಲ್ಲ; ರೈತ, ದಲಿತ, ಕಾರ್ಮಿಕ, ದಿನಗೂಲಿ, ವಲಸೆ ಕಾರ್ಮಿಕರು, ಪೌರ ಕಾರ್ಮಿಕರು, ಪ್ರಕೃತಿ-ಪರಿಸರ, ಪೌರತ್ವದ ಪ್ರಶ್ನೆ, ರಾಜಕೀಯ ಕೈದು, ಮಾಹಿತಿ ಹಕ್ಕು ಕಾಯ್ದೆ… ಇತ್ಯಾದಿ ಹೀಗೆ ಎಲ್ಲವನ್ನೂ ಕೂಡಿಸಿ ಹೇಳುತ್ತಾ “ನಮ್ಮ ಸಂವಿಧಾನ ಮತ್ತು ಪ್ರಜಾತಂತ್ರವನ್ನು ರಕ್ಷಿಸಿಕೊಳ್ಳಲು ನಾವು ಒಂದುಗೂಡುತ್ತಿದ್ದೇವೆ” ಎಂದು ಕೂಗಿ ಹೇಳುತ್ತಿದ್ದಾರೆ. ಒಂಟಿ ಸಂಘಟನೆಗಳಾದ ನಾವೂ ಕೂಡ ಒಕ್ಕೂಟವಾಗಬೇಕಾಗಿದೆ. ಎಲ್ಲರೂ ಸಮುದಾಯದೊಳಗೆ ಕರಗಿ ಹೋಗಬೇಕಾಗಿದೆ.

ಸಮುದಾಯದೊಳಗಿಂದ ಹೊಸ ಮಾತು, ಹೊಸ ನುಡಿಗಟ್ಟು, ಹೊಸ ನಡೆ ಹುಟ್ಟಬೇಕಾಗಿದೆ. ಅದು ಇದೀಗ ಚಿಗುರೊಡೆಯುತ್ತಿದೆ ಎಂದೆನಿಸುತ್ತಿದೆ.

ಕೃಪೆ: ನಮ್ಮ ಬನವಾಸಿ


ಇದನ್ನೂ ಓದಿ: ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...