Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...