Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...