Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...