Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...