Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...