Homeಚಳವಳಿಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಮದುವೆಯಾಗುವ ಮುನ್ನ ಜಾತಿ, ಧರ್ಮಗಳಾಚೆ ಯೋಚಿಸಲು ಸಾಧ್ಯವೇ? : ಡಾ. ಗಣೇಶ್ ದೇವಿಯವರ ಮನವಿ 

ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ 'ವೈಷ್ಣವ ಜನ' ಕನಸುಗಳನ್ನು ಸಾಕಾರಗೊಳಿಸೋಣ. ಜೊತೆಯಾಗಿ ನಮಗದನ್ನು ಮಾಡಲು ಸಾಧ್ಯವಿದೆ..

- Advertisement -
- Advertisement -

ಡಾ. ಗಣೇಶ್ ಎನ್. ದೇವಿ (69) ಅವರು ಪ್ರಸಿದ್ಧ ಲೇಖಕರು, ಭಾಷಾಶಾಸ್ತ್ರಜ್ಞರು ಮತ್ತು ಸಾಂಸ್ಕೃತಿಕ ಕಾರ್ಯಕರ್ತರು. ಅವರು ಭಾರತೀಯ ಜನಭಾಷಾ ಸರ್ವೇ (ಭಾಷೆಗಳ ಅತ್ಯಂತ ದೊಡ್ಡ ಸಮೀಕ್ಷೆ)ಗಾಗಿ ಮತ್ತು ಅವರು ಸ್ಥಾಪಿಸಿರುವ ಆದಿವಾಸಿ ಅಕಾಡೆಮಿಗಾಗಿ ಖ್ಯಾತರು. ಡಾ. ದೇವಿಯವರು ಮರಾಠಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯುತ್ತಾರೆ. ಅವರ ಹೆಚ್ಚಿನ ಕೆಲಸಗಳು ಗುಜರಾತ್ ಮತ್ತು ಮಹಾರಾಷ್ಟ್ರದ ಅದಿವಾಸಿಗಳ ನಡುವೆ ನಡೆಯುತ್ತವೆ.

ಅವರು ಅಕ್ಟೋಬರ್ 5ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಯುವ ಜನರಿಗೆ ಮನವಿಯೊಂದನ್ನು ಮಾಡುತ್ತಿದ್ದಾರೆ. ಅದೆಂದರೆ

ಮದುವೆಯಾಗುವ ಕುರಿತು ಯೋಚಿಸುವ ಮೊದಲು ಜಾತಿ, ಧರ್ಮಗಳಾಚೆ ನಿಂತು ಚಿಂತಿಸುವ ಸಂಕಲ್ಪ ಮಾಡುವುದು.

ದೇವಿಯವರು ಒಂದು ವಿಶಿಷ್ಟ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನಕ್ಕೆ 100 ಯುವಜನರು ಇಂತಹಾ ಸಂಕಲ್ಪ ಮಾಡಿ ಸಂದೇಶ ಕಳುಹಿಸಿದರೆ ಮಾತ್ರ ಅವರು ಆಹಾರ ಸೇವನೆ ಮಾಡುತ್ತಾರೆ. ಇಲ್ಲದಿದ್ದರೆ ಕೇವಲ ನೀರು ಮಾತ್ರ ಕುಡಿಯುತ್ತಾರೆ. ಅಕ್ಟೋಬರ್ 2ರಿಂದ ಅವರ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಮೊದಲ ಐದು ದಿನಗಳಲ್ಲಿ ಅವರಿಗೆ 2000ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿವೆ. ಅವರ ಈ ಸಂಕಲ್ಪಕ್ಕೆ ನೀವು ಜೊತೆಗೂಡುವುದಾದರೆ ಈ ಕೆಳಗಿನ ಇಮೈಲ್ ಅಥವಾ ಗೂಗಲ್‌ ಫಾರ್ಮ್‌ ಬಳಸಿ.

ಅವರ ಇ‌ಮೈಲ್ ಐಡಿ ಕೆಳಗಿದೆ.

 [email protected]

ಜೊತೆಗೆ ಈ ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಹೊಂದಿದ್ದು, ಅಲ್ಲಿ ಯುವಕರು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೈಲ್ ಇತ್ಯಾದಿಗಳನ್ನು ಬರೆಯಬಹುದು.

 https://forms.gle/fyUPTzdFfU6yNr7L9

ಅಭಿಯಾನದ ಉದ್ದೇಶ ಏನು?
ಸ್ವಭಾವತಃ ಕೋಮುವಾದಿಗಳಲ್ಲದ ಯುವಜನರನ್ನು ಜೊತೆಗೆ ತಂದು, ಜಾತ್ಯತೀತ ಚಿಂತನೆಯು ಮುಖ್ಯವಾಹಿನಿಗೆ ಬರುವಂತೆ ಮತ್ತು ಅದನ್ನು ಯಾರೂ ಅವಗಣಿಸದಂತೆ ಮಾಡುವುದು.

ಅವರು ‘ಮುಖ್ಯವಾಹಿನಿಯ ಭಾರತ’ (Mainstream-India) ಎಂಬ ಹೆಸರಿನಲ್ಲಿ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಾಗಪುರದಲ್ಲಿ ಸಮ್ಮೇಳನವೊಂದನ್ನು ಆಯೋಜಿಸಿದ್ದಾರೆ.

“ನಾನು ಇದನ್ನೊಂದು ಸಾರ್ವಜನಿಕ ಸಭೆ, ಯಾವುದೇ ಮಾಧ್ಯಮ ಸಭೆ, ಅಥವಾ ಆಧ್ಯಾತ್ಮಿಕ ಯಾತ್ರೆಯನ್ನಾಗಿ ಮಾಡಲು ಬಯಸುವುದಿಲ್ಲ. ಇದು ಈ ನಿರಾಶಾದಾಯಕ ಕಾಲದಲ್ಲಿ ಪ್ರತಿರೋಧ ಒಡ್ಡುವ ಸಲುವಾಗಿ ಯುವಜನರನ್ನು ಹತ್ತಿರಕ್ಕೆ ತರುವ ಪ್ರಾಯೋಗಿಕ ಅಭಿಯಾನವಾಗಿದೆ. ನನ್ನ ದಿನನಿತ್ಯದ ಕೆಲಸಗಳು ಎಂದಿನಂತೆ ಸಾಗುತ್ತವೆ” ಎಂದು ದೇವಿಯವರು ಹೇಳುತ್ತಾರೆ. 

“ಮೊದಲ ಮೂರು ದಿನಗಳಲ್ಲಿ ಮಹಾರಾಷ್ಟ್ರದಿಂದ ಸುಮಾರು 1600 ಇಮೈಲ್/ಸಂದೇಶಗಳು ಬಂದಿವೆ. ನಾನು ನನ್ನ ಮನವಿಯನ್ನು ಕರ್ನಾಟಕಕ್ಕೂ ವಿಸ್ತರಿಸಲು ಬಯಸುತ್ತೇನೆ” ಎಂದವರು ಹೇಳಿದ್ದಾರೆ.

“ಆಧುನಿಕ ಸಮಾಜದಲ್ಲಿ ಧರ್ಮ ಮತ್ತು ಜಾತಿ ಅನಪೇಕ್ಷಣೀಯ. ಆಧುನಿಕ ಸಮಾಜ ನಿರ್ಮಾಣಕ್ಕೆ ಜಾತಿ, ಧರ್ಮಗಳನ್ನು ಮೀರಿದ ಚಿಂತನೆ ಅಗತ್ಯ ಎಂದು ನೀವು ಭಾವಿಸುವುದಾದಲ್ಲಿ ದಯವಿಟ್ಟು ಈ ಸಂದೇಶವನ್ನು ಪ್ರಚಾರ ಮಾಡಿ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿಗೆ ತಲಪಿಸಿ. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆಯ ಕನಸು ಮತ್ತು ಗಾಂಧಿಯವರ ನಿಜವಾದ ವೈಷ್ಣವ ಜನರನ್ನು ನಿರ್ಮಿಸುವ ಕನಸನ್ನು ಸಾಕಾರಗೊಳಿಸೋಣ. ಜೊತೆಯಾಗಿ ಇದನ್ನು ಮಾಡಲು ನಮಗೆ ಸಾಧ್ಯವಿದೆ.” ಇದುವೇ ಡಾ. ದೇವಿಯವರ ಮನವಿಯಾಗಿದೆ..

ಡಾ.ದೇವಿಯವರ ಬಗ್ಗೆ ಮತ್ತೊಂದಿಷ್ಟು..

ಡಾ. ದೇವಿಯವರು 1980ರಿಂದ 1996ರ ತನಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಅನಧಿಸೂಚಿತ ಅಲೆಮಾರಿ ಪಂಗಡಗಳು(ಡಿಎನ್‌ಟಿ) ಮತ್ತು ಆದಿವಾಸಿಗಳ ನಡುವೆ ಕೆಲಸ ಮಾಡುವ ಸಲುವಾಗಿ ತನ್ನ ಶೈಕ್ಷಣಿಕ ವೃತ್ತಿಯನ್ನು ತೊರೆದರು. ಈ ಕೆಲಸದ ವೇಳೆ ಅವರು ಬರೋಡಾದಲ್ಲಿ ಭಾಷಾ ಸಂಶೋಧನೆ ಮತ್ತು ಪ್ರಕಾಶನ ಕೇಂದ್ರವನ್ನು ಆರಂಭಿಸಿದರು. ಜೊತೆಗೆ ತೇಜ್‌ಗಢದಲ್ಲಿ ಆದಿವಾಸಿ ಅಕಾಡೆಮಿಯನ್ನೂ ಸ್ಥಾಪಿಸಿದರು. ಡಿಎನ್‌ಟಿ ಏಕ್ಷನ್ ಗ್ರೂಪ್ ಎಂಬ ಸಂಘಟನೆಯನ್ನೂ ಕಟ್ಟಿದರು. ಮೂರು ಸಾವಿರದಷ್ಟು ಸ್ವಯಂಸೇವಕರ ಸಹಾಯದಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಭಾಷಾ ಸಮೀಕ್ಷೆಯನ್ನು ಸಂಘಟಿಸಿ, 50 ಬಹುಭಾಷಾ ಸಂಪುಟಗಳನ್ನು ಪ್ರಕಟಿಸಿದರು. ಭಾರತದಾದ್ಯಂತ ಸಂಚರಿಸಿ 1000ಕ್ಕೂ ಹೆಚ್ಚು ಅಳಿಯುತ್ತಿರುವ ಭಾಷೆಗಳನ್ನು ದಾಖಲಿಸಿದರು.

ಧಾರವಾಡದಲ್ಲಿ ನೆಲೆಸಿರುವ ಅವರು, ದಕ್ಷಿಣಾಯನ ಎಂಬ ಚಳವಳಿಯನ್ನು ಆರಂಭಿಸಿದ್ದಾರೆ. ಇದು ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಹಲವಾರು ಬುದ್ಧಿಜೀವಿಗಳ ಹತ್ಯೆಗೆ ಕಲಾವಿದರು, ಲೇಖಕರು ಮತ್ತು ಬುದ್ಧಿಜೀವಿಗಳ ಪ್ರತಿಕ್ರಿಯಾತ್ಮಕ ಚಳವಳಿಯಾಗಿದೆ. ಡಾ. ದೇವಿಯವರು ಪದ್ಮಶ್ರೀ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು. ಅವರು ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಭಿನ್ನಾಭಿಪ್ರಾಯದ ದಮನವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಮರಳಿಸಿದ್ದಾರೆ.

ಅವರ ದಕ್ಷಿಣಾಯನ ಚಳವಳಿಯು ಮಹಾತ್ಮಾ ಗಾಂಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುತ್ತದೆ. ಅವರ ಅಭಿಯಾನವು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ,  ಗೋವಾ, ತೆಲಂಗಾಣ, ಉತ್ತರಖಂಡ, ಪಶ್ಚಿಮ ಬಂಗಾಳ, ಪಂಜಾಬ್, ದಿಲ್ಲಿ ಮುಂತಾದ ರಾಜ್ಯಗಳಿಗೆ ವಿಸ್ತರಿಸುತ್ತಿದೆ. ಅವರ ‘ಆಫ್ಟರ್ ಅಮ್ನೇಶಿಯಾ’ ಎಂಬ ಗ್ರಂಥವು ಸಾಹಿತ್ಯ ತತ್ವದಲ್ಲಿ ಶ್ರೇಷ್ಟ ಕೃತಿ ಎಂದು ಪರಿಗಣಿಸಲ್ಪಟ್ಟಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...