Homeಅಂತರಾಷ್ಟ್ರೀಯಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

ಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

- Advertisement -
- Advertisement -

ಕೆನಡಾ ತನ್ನ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ, ಆದರೆ ಈ ಆರೋಪವನ್ನು ಭಾರತವು ತಳ್ಳಿಹಾಕಿದೆ.

2019 ಮತ್ತು 2021ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ರಹಸ್ಯ ಹಸ್ತಕ್ಷೇಪವನ್ನು ಉಲ್ಲೇಖಿಸಿ ಕೆನಡಾದ ಬೇಹುಗಾರಿಕಾ ಸಂಸ್ಥೆಯು ವರ್ಗೀಕರಿಸದ ಸಾರಾಂಶವನ್ನು ಬಿಡುಗಡೆ ಮಾಡಿದೆ. ಭಾರತವು ಈ ಆರೋಪವನ್ನು ‘ಆಧಾರರಹಿತ’ ಎಂದು ಕರೆದಿದೆ.

ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವೀಸ್(CSIS), ಕೆನಡಾದ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಭಾರತ ಮತ್ತು ಪಾಕಿಸ್ತಾನ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ ಹೇಳುತ್ತದೆ. ಆದರೆ, ಭಾರತವು ಈ ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ.

CSIS ದಾಖಲೆಗಳು 2021ರಲ್ಲಿ, ಭಾರತ ಸರ್ಕಾರವು ಖಲಿಸ್ತಾನಿ ಚಳುವಳಿ ಅಥವಾ ಪಾಕಿಸ್ತಾನದ ಪರವಾದ ನಿಲುವುಗಳ ಬಗ್ಗೆ ಸಹಾನುಭೂತಿ ಹೊಂದಿರುವ ಭಾರತೀಯ ಮೂಲದ ಮತದಾರರಿಗೆ ಆಶ್ರಯ ನೀಡುವ ನಿರ್ದಿಷ್ಟ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಭಾರತ ಸರ್ಕಾರ 2021ರಲ್ಲಿ ಹಸ್ತಕ್ಷೇಪದ ಉದ್ದೇಶದಿಂದ ಭಾರತ ಸರ್ಕಾರ ನಕಲಿ ಏಜೆಂಟರನ್ನು ಬಳಸುವುದು ಸೇರಿದಂತೆ ರಹಸ್ಯ ಚಟುವಟಿಕೆಗಳನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಸಿಎಸ್ಐಎಸ್ ಆಪಾದಿಸಿದೆ.

ಅಂತೆಯೇ, 2019ರಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಕೆನಡಾದ ರಾಜಕೀಯದೊಳಗೆ ಪಾಕಿಸ್ತಾನದ ಹಿತಾಸಕ್ತಿಗಳನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ರಹಸ್ಯ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಹೇಳಿದೆ. ಭಾರತವು ಈ ಕುರಿತ ಆರೋವನ್ನು ನಿರಾಕರಿಸಿ ಇತರ ರಾಷ್ಟ್ರಗಳ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡದಿರುವ ತನ್ನ ಬದ್ಧತೆಯನ್ನು ಉಲ್ಲೇಖಿಸಿದೆ. ಭಾರತೀಯ ಹಸ್ತಕ್ಷೇಪದ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಣಧೀರ ಜೈಸ್ವಾಲ್, ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಹಸ್ತಕ್ಷೇಪ ಮಾಡುತ್ತಿದೆ ಎಂಬ ಪ್ರತ್ಯಾರೋಪ ಮಾಡಿದರು.

ಜನವರಿಯಲ್ಲಿ, ಕೆನಡಾ ತನ್ನ ರಾಷ್ಟ್ರೀಯ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಆರೋಪಗಳ ಬಗ್ಗೆ ತನಿಖೆ ಮಾಡುವ ಬಗ್ಗೆ ಹೇಳಿತ್ತು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಭಾರತದ ಮೇಲೆ ನಿರ್ದಿಷ್ಟ ಗಮನವನ್ನು ಕೇಂದ್ರೀಕರಿಸಿದೆ. ಕೆನಡಾದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾದ್ಯಮ ವರದಿಗಳು ನಮ್ಮ ಗಮನಕ್ಕೆ ಬಂದಿದೆ. ಕೆನಡಾದ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪದ ಎಲ್ಲಾ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಚೀನಾ ದೇಶವು, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಡಳಿತಕ್ಕೆ ಸಹಾನುಭೂತಿ ಹೊಂದಿರುವ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆನಡಾದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ ಎಂಬ ಗುಪ್ತಚರ ವರದಿಗಳಿಗೆ ಪ್ರತಿಕ್ರಿಯೆಯಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಕುರಿತು ತನಿಖೆಗೆ ಸೂಚಿಸಿದ್ದರು.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಎರಡೂ ದೇಶಗಳ ನಡುವಿನ ಹಳಸಿದ್ದ ಸಂಬಂಧ ಸಂಪೂರ್ಣವಾಗಿ ಸರಿ ದಾರಿಗೆ ಬರುವ ಮೊದಲೇ ಭಾರತದ ವಿರುದ್ಧ ಕೆನಡಾ ಇದೀಗ ಮತ್ತೊಂದು ಆರೋಪವನ್ನು ಮಾಡಿದೆ.

ಇದನ್ನು ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...