Homeಅಂತರಾಷ್ಟ್ರೀಯಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

ಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

- Advertisement -
- Advertisement -

ಕೆನಡಾ ತನ್ನ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ, ಆದರೆ ಈ ಆರೋಪವನ್ನು ಭಾರತವು ತಳ್ಳಿಹಾಕಿದೆ.

2019 ಮತ್ತು 2021ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ರಹಸ್ಯ ಹಸ್ತಕ್ಷೇಪವನ್ನು ಉಲ್ಲೇಖಿಸಿ ಕೆನಡಾದ ಬೇಹುಗಾರಿಕಾ ಸಂಸ್ಥೆಯು ವರ್ಗೀಕರಿಸದ ಸಾರಾಂಶವನ್ನು ಬಿಡುಗಡೆ ಮಾಡಿದೆ. ಭಾರತವು ಈ ಆರೋಪವನ್ನು ‘ಆಧಾರರಹಿತ’ ಎಂದು ಕರೆದಿದೆ.

ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವೀಸ್(CSIS), ಕೆನಡಾದ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಭಾರತ ಮತ್ತು ಪಾಕಿಸ್ತಾನ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ ಹೇಳುತ್ತದೆ. ಆದರೆ, ಭಾರತವು ಈ ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ.

CSIS ದಾಖಲೆಗಳು 2021ರಲ್ಲಿ, ಭಾರತ ಸರ್ಕಾರವು ಖಲಿಸ್ತಾನಿ ಚಳುವಳಿ ಅಥವಾ ಪಾಕಿಸ್ತಾನದ ಪರವಾದ ನಿಲುವುಗಳ ಬಗ್ಗೆ ಸಹಾನುಭೂತಿ ಹೊಂದಿರುವ ಭಾರತೀಯ ಮೂಲದ ಮತದಾರರಿಗೆ ಆಶ್ರಯ ನೀಡುವ ನಿರ್ದಿಷ್ಟ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಭಾರತ ಸರ್ಕಾರ 2021ರಲ್ಲಿ ಹಸ್ತಕ್ಷೇಪದ ಉದ್ದೇಶದಿಂದ ಭಾರತ ಸರ್ಕಾರ ನಕಲಿ ಏಜೆಂಟರನ್ನು ಬಳಸುವುದು ಸೇರಿದಂತೆ ರಹಸ್ಯ ಚಟುವಟಿಕೆಗಳನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಸಿಎಸ್ಐಎಸ್ ಆಪಾದಿಸಿದೆ.

ಅಂತೆಯೇ, 2019ರಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಕೆನಡಾದ ರಾಜಕೀಯದೊಳಗೆ ಪಾಕಿಸ್ತಾನದ ಹಿತಾಸಕ್ತಿಗಳನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ರಹಸ್ಯ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಹೇಳಿದೆ. ಭಾರತವು ಈ ಕುರಿತ ಆರೋವನ್ನು ನಿರಾಕರಿಸಿ ಇತರ ರಾಷ್ಟ್ರಗಳ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡದಿರುವ ತನ್ನ ಬದ್ಧತೆಯನ್ನು ಉಲ್ಲೇಖಿಸಿದೆ. ಭಾರತೀಯ ಹಸ್ತಕ್ಷೇಪದ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಣಧೀರ ಜೈಸ್ವಾಲ್, ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಹಸ್ತಕ್ಷೇಪ ಮಾಡುತ್ತಿದೆ ಎಂಬ ಪ್ರತ್ಯಾರೋಪ ಮಾಡಿದರು.

ಜನವರಿಯಲ್ಲಿ, ಕೆನಡಾ ತನ್ನ ರಾಷ್ಟ್ರೀಯ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಆರೋಪಗಳ ಬಗ್ಗೆ ತನಿಖೆ ಮಾಡುವ ಬಗ್ಗೆ ಹೇಳಿತ್ತು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಭಾರತದ ಮೇಲೆ ನಿರ್ದಿಷ್ಟ ಗಮನವನ್ನು ಕೇಂದ್ರೀಕರಿಸಿದೆ. ಕೆನಡಾದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾದ್ಯಮ ವರದಿಗಳು ನಮ್ಮ ಗಮನಕ್ಕೆ ಬಂದಿದೆ. ಕೆನಡಾದ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪದ ಎಲ್ಲಾ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಚೀನಾ ದೇಶವು, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಡಳಿತಕ್ಕೆ ಸಹಾನುಭೂತಿ ಹೊಂದಿರುವ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆನಡಾದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ ಎಂಬ ಗುಪ್ತಚರ ವರದಿಗಳಿಗೆ ಪ್ರತಿಕ್ರಿಯೆಯಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಕುರಿತು ತನಿಖೆಗೆ ಸೂಚಿಸಿದ್ದರು.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಎರಡೂ ದೇಶಗಳ ನಡುವಿನ ಹಳಸಿದ್ದ ಸಂಬಂಧ ಸಂಪೂರ್ಣವಾಗಿ ಸರಿ ದಾರಿಗೆ ಬರುವ ಮೊದಲೇ ಭಾರತದ ವಿರುದ್ಧ ಕೆನಡಾ ಇದೀಗ ಮತ್ತೊಂದು ಆರೋಪವನ್ನು ಮಾಡಿದೆ.

ಇದನ್ನು ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...