Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...