Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...