Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...