Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...