Homeಮುಖಪುಟಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

ಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲು ಕೆನಡಾದ ಪೊಲೀಸರು ಸಜ್ಜಾಗಿದ್ದಾರೆ. ಶೂಟರ್‌ಗಳು ಕೆನಡಾ ಪೊಲೀಸರ ಕಣ್ಗಾವಲಿನಲ್ಲಿದ್ದು, ಶೀಘ್ರ ಬಂಧನ ನಡೆಯಲಿದೆ ಎನ್ನಲಾಗಿದೆ.

ದಿ ಗ್ಲೋಬ್ ಮತ್ತು ಮೇಲ್ ಪತ್ರಿಕೆಯ ಪ್ರಕಾರ, ಶಂಕಿತರು ಪ್ರಸ್ತುತ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಮತ್ತು ಕೆಲವೇ ವಾರಗಳಲ್ಲಿ ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಇಬ್ಬರು ಶಂಕಿತ ಹಂತಕರು ನಿಜ್ಜರ್ ಹತ್ಯೆಯ ನಂತರ ಕೆನಡಾವನ್ನು ತೊರೆದಿಲ್ಲ ಮತ್ತು ತಿಂಗಳುಗಳಿಂದ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಎಂದು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಹಂತಕರು ಮತ್ತು ಭಾರತ ಸರ್ಕಾರದೊಂದಿಗೆ ಅವರ ಸಂಪರ್ಕದ ಬಗ್ಗೆ ಪೊಲೀಸರು ವಿವರಗಳನ್ನು ಬಹಿರಂಗಪಡಿಸಲಿದ್ದಾರೆ ಎಂದು ವರದಿ ಹೇಳಿದೆ.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಕಳೆದ ತಿಂಗಳು ವೀಸಾ ಸೇವೆಗಳನ್ನು ಭಾರತವು ಪುನರಾರಂಭಿಸಿತ್ತು.

ಇದರ ಬೆನ್ನಲ್ಲೇ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಸಿಖ್ಖ್ ಪ್ರತೇಕತವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆ ಮಾಡುವ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದರು. ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆಗೆ ಸಂಬಂಧಿಸಿ ಗುಜರಾತ್‌ನ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಆತನಿಗೆ ಬಂಧಿಸಿ ಅಮೆರಿಕ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಗುಜರಾತ್‌ನ ನಿಖಿಲ್‌ ಗುಪ್ತಾ ಭಾರತದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಇದಲ್ಲದೆ ಭಾರತದ ಅಧಿಕಾರಿಯ ಸಹಾಯದಿಂದ ಗುಪ್ತಾ ಹಂತಕನಿಗೆ ಸಿಖ್ ಪ್ರತ್ಯೇಕತಾವಾದಿ ನಾಯಕನನ್ನು ಕೊಲ್ಲಲು 1,00,000 ಅಮೆರಿಕನ್ ಡಾಲರ್ ಪಾವತಿಸಲು ಒಪ್ಪಿಕೊಂಡಿದ್ದಾನೆ. ಜೂ.9, 2023 ರಂದು ಗುಪ್ತಾ ಕೊಲೆಗೆ ಮುಂಗಡ ಪಾವತಿಯಾಗಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಯುಸಿಯಲ್ಲಿ 15,000 ಅಮೆರಿಕನ್ ಡಾಲರ್ ನ್ನು ಹಂತಕನಿಗೆ ಪಾವತಿಗೆ ವ್ಯವಸ್ಥೆ ಮಾಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ನಿಜ್ಜರ್‌ ಹತ್ಯೆ ಬಗ್ಗೆ ಕೆನಡಾವು ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದ್ದರು.

ಇದನ್ನು ಓದಿ: ‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...