Homeಮುಖಪುಟಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

ಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲು ಕೆನಡಾದ ಪೊಲೀಸರು ಸಜ್ಜಾಗಿದ್ದಾರೆ. ಶೂಟರ್‌ಗಳು ಕೆನಡಾ ಪೊಲೀಸರ ಕಣ್ಗಾವಲಿನಲ್ಲಿದ್ದು, ಶೀಘ್ರ ಬಂಧನ ನಡೆಯಲಿದೆ ಎನ್ನಲಾಗಿದೆ.

ದಿ ಗ್ಲೋಬ್ ಮತ್ತು ಮೇಲ್ ಪತ್ರಿಕೆಯ ಪ್ರಕಾರ, ಶಂಕಿತರು ಪ್ರಸ್ತುತ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಮತ್ತು ಕೆಲವೇ ವಾರಗಳಲ್ಲಿ ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಇಬ್ಬರು ಶಂಕಿತ ಹಂತಕರು ನಿಜ್ಜರ್ ಹತ್ಯೆಯ ನಂತರ ಕೆನಡಾವನ್ನು ತೊರೆದಿಲ್ಲ ಮತ್ತು ತಿಂಗಳುಗಳಿಂದ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಎಂದು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಹಂತಕರು ಮತ್ತು ಭಾರತ ಸರ್ಕಾರದೊಂದಿಗೆ ಅವರ ಸಂಪರ್ಕದ ಬಗ್ಗೆ ಪೊಲೀಸರು ವಿವರಗಳನ್ನು ಬಹಿರಂಗಪಡಿಸಲಿದ್ದಾರೆ ಎಂದು ವರದಿ ಹೇಳಿದೆ.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಕಳೆದ ತಿಂಗಳು ವೀಸಾ ಸೇವೆಗಳನ್ನು ಭಾರತವು ಪುನರಾರಂಭಿಸಿತ್ತು.

ಇದರ ಬೆನ್ನಲ್ಲೇ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಸಿಖ್ಖ್ ಪ್ರತೇಕತವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆ ಮಾಡುವ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದರು. ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆಗೆ ಸಂಬಂಧಿಸಿ ಗುಜರಾತ್‌ನ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಆತನಿಗೆ ಬಂಧಿಸಿ ಅಮೆರಿಕ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಗುಜರಾತ್‌ನ ನಿಖಿಲ್‌ ಗುಪ್ತಾ ಭಾರತದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಇದಲ್ಲದೆ ಭಾರತದ ಅಧಿಕಾರಿಯ ಸಹಾಯದಿಂದ ಗುಪ್ತಾ ಹಂತಕನಿಗೆ ಸಿಖ್ ಪ್ರತ್ಯೇಕತಾವಾದಿ ನಾಯಕನನ್ನು ಕೊಲ್ಲಲು 1,00,000 ಅಮೆರಿಕನ್ ಡಾಲರ್ ಪಾವತಿಸಲು ಒಪ್ಪಿಕೊಂಡಿದ್ದಾನೆ. ಜೂ.9, 2023 ರಂದು ಗುಪ್ತಾ ಕೊಲೆಗೆ ಮುಂಗಡ ಪಾವತಿಯಾಗಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಯುಸಿಯಲ್ಲಿ 15,000 ಅಮೆರಿಕನ್ ಡಾಲರ್ ನ್ನು ಹಂತಕನಿಗೆ ಪಾವತಿಗೆ ವ್ಯವಸ್ಥೆ ಮಾಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ನಿಜ್ಜರ್‌ ಹತ್ಯೆ ಬಗ್ಗೆ ಕೆನಡಾವು ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದ್ದರು.

ಇದನ್ನು ಓದಿ: ‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...