Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...