Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...