Homeಅಂತರಾಷ್ಟ್ರೀಯಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

ಜೂಮ್ ಕಾನ್ಫರೆನ್ಸ್‌ನಲ್ಲಿ ಬೆತ್ತಲೆ ಕಾಣಿಸಿಕೊಂಡ ಕೆನಡಾ ಸಂಸದ!

- Advertisement -
- Advertisement -

ಕೆನಡಾದ ಹೌಸ್ ಆಫ್ ಕಾಮನ್ಸ್ ಜೂಮ್ ಕಾನ್ಫರೆನ್ಸ್‌ನಲ್ಲಿ ಎಂಪಿಯೊಬ್ಬರು ನಗ್ನರಾಗಿ ಕಾಣಿಸಿಕೊಂಡು ನಂತರ ಕ್ಷಮೆ ಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಲಿಬರಲ್ ಸಂಸದ ಅಮೋಸ್ ವಿಲಿಯಮ್ಸ್, ವರ್ಚುವಲ್ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ಕ್ಯಾಮೆರಾ ಆನ್ ಮಾಡಿದಾಗ ತನ್ನ ದೇಹದ ಮುಂಭಾಗವನ್ನು ಮುಚ್ಚಿಕೊಳ್ಳಲು ಒದ್ದಾಡಿ ನಂತರ ಮಾಯವಾದರು.

“ನಾನು ಇಂದು ನಿಜವಾಗಿಯೂ ದುರದೃಷ್ಟಕರ ತಪ್ಪು ಮಾಡಿದ್ದೇನೆ. ಇದರಿಂದ ನಾನು ಮುಜುಗರಕ್ಕೊಳಗಾಗಿದ್ದೇನೆ” ಎಂದು 46 ವರ್ಷದ ಸಂಸದ, ಬುಧವಾರ ತಡರಾತ್ರಿ ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ಸಾರ್ವಜನಿಕಗೊಳಿಸಿದ ನಂತರ ಟ್ವೀಟ್ ಮಾಡಿದ್ದಾರೆ.

“ನಾನು ಜಾಗಿಂಗ್‌ಗೆ ಹೋಗಿ ಬಂದ ನಂತರ ನಂತರ ದಿನಿತ್ಯದ ಬಟ್ಟೆ ಬದಲಾಯಿಸುವ ಸಂದರ್ಭದಲ್ಲಿ ನನ್ನ ಲ್ಯಾಪ್‌ಟಾಪ್ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿಯೇ ಇತ್ತು. ಸದನದಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ, ಇದು ಮತ್ತೆ ಸಂಭವಿಸುವುದಿಲ್ಲ” ಎಂದು ಸಂಸದ ಕ್ಷಮಾಪಣೆ ಕೇಳಿದ್ದಾರೆ.

ಆಗ ಪ್ರಶ್ನೋತ್ತರ ಅವಧಿ ನಡೆಯುತ್ತಿತ್ತು. ಈ ಸಂಸದ ಆಗ ಸಭೆ ಉದ್ದೇಶ ಮಾತನಾಡಿದ್ದರೆ ಹೌಸ್ ಆಫ್ ಕಾಮನ್ಸ್ ಮಾರ್ಗದರ್ಶಿ ಪುಸ್ತಕವನ್ನು ಉಲ್ಲಂಘಿಸುತ್ತಿದ್ದರು. ಆದರೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿಲ್ಲ.

‘ರೂಲ್ಸ್ ಆಫ್ ಆರ್ಡರ್ ಮತ್ತು ಡೆಕೋರಮ್’ ವಿಭಾಗದ ಅಡಿಯಲ್ಲಿ, ಚರ್ಚೆಯಲ್ಲಿ ಭಾಗವಹಿಸಲು ಯಾವುದೇ ಡ್ರೆಸ್ ಕೋಡ್ ಅಗತ್ಯವಿಲ್ಲ, ಆದರೆ ಪುರುಷ ಭಾಷಣಕಾರರು ಜಾಕೆಟ್, ಶರ್ಟ್ ಮತ್ತು ಟೈಗಳಂತಹ “ಸಮಕಾಲೀನ ವ್ಯವಹಾರ ಉಡುಪನ್ನು ಧರಿಸಿರಬೇಕು” ಎಂದು ನವಿವರಿಸಲಾಗಿದೆ.

ಅಮೋಸ್‌ರ ಲಿಬರಲ್ ಪಕ್ಷವನ್ನು ಮುನ್ನಡೆಸುತ್ತಿರುವ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.

ವಿಪಕ್ಷ ನಾಯಕಿ ಕ್ಲಾಡ್ ಡೆಬೆಲ್ಲೆಫ್ಯೂಲೆ “ಸಂಸದ ಉತ್ತಮ ದೈಹಿಕ ಆಕಾರದಲ್ಲಿದ್ದಾರೆ ಎಂದು ನಾವು ನೋಡಿದ್ದೇವೆ, ಆದರೆ ಸದಸ್ಯರು ಜಾಗರೂಕರಾಗಿರಿ ಮತ್ತು ಕ್ಯಾಮೆರಾವನ್ನು ಚೆನ್ನಾಗಿ ನಿಯಂತ್ರಿಸಲು ಎಚ್ಚರ ವಹಿಸಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾಗಿ ಕೆನಡಿಯನ್ ಪ್ರೆಸ್ ವರದಿ ಮಾಡಿದೆ.

“ಟೈ ಮತ್ತು ಜಾಕೆಟ್ ಕಡ್ಡಾಯವಾಗಿದೆ ಎಂದು ಸದಸ್ಯರಿಗೆ, ವಿಶೇಷವಾಗಿ ಪುರುಷರಿಗೆ ನೆನಪಿಸುವ ಅಗತ್ಯವಿರಬಹುದು, ಆದರೆ ಶರ್ಟ್, ಬಾಕ್ಸರ್ ಶಾರ್ಟ್ಸ್ ಅಥವಾ ಪ್ಯಾಂಟ್ ಕೂಡಾ ಇದೆ” ಎಂದು ಕೆನಡಿಯನ್ ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 15ರ ವರೆಗೆ ತಾಜ್‌ ಮಹಲ್, ಕುತುಬ್‌ ಮಿನಾರ್‌ ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...