Homeಅಂತರಾಷ್ಟ್ರೀಯಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು, ಅವರ ಮೇಲೆ ತೀವ್ರ ಕಣ್ಗಾವಲು ಇರಿಸಲಾಗಿತ್ತು ಎಂದು ಸಿಬಿಸಿ ಹೇಳಿದೆ. ಶಂಕಿತರು ಕೆನಡಾದಲ್ಲಿ ವಾಸಿಸುತ್ತಿದ್ದರು. ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಹೊರಗೆ ನಿಜ್ಜರ್ ಹತ್ಯೆಯಲ್ಲಿ ಈ ಮೂವರು ಶೂಟರ್‌, ಡ್ರೈವರ್‌ ಮತ್ತು ಸ್ಪಾಟರ್‌ಗಳಾಗಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ ಎಂದು ವರದಿಯಾಗಿದೆ. ಭಾರತ ಸರ್ಕಾರದೊಂದಿಗೆ ಆರೋಪಿಗಳಿಗೆ ಯಾವುದಾದರೂ ಸಂಬಂಧಗಳು ಇದೆಯಾ ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು RCMP ಸೂಪರಿಂಟೆಂಡೆಂಟ್ ಮಂದೀಪ್ ಮೂಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ “ಸಂಭಾವ್ಯ” ಕೈವಾಡದ ಆರೋಪದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದಗೆಟ್ಟಿತ್ತು. ಭಾರತವು ಟ್ರೂಡೊ ಅವರ ಆರೋಪಗಳನ್ನು “ಅಸಂಬದ್ಧ” ಎಂದು ತಳ್ಳಿಹಾಕಿತ್ತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಯೋಜಿತ ನರಹತ್ಯೆ ತನಿಖಾ ತಂಡದ ನೇತೃತ್ವ ವಹಿಸಿದ್ದ ಮಂದೀಪ್ ಮೂಕರ್, ಶಂಕಿತರನ್ನು ಕರಣ್ ಬ್ರಾರ್, ಕರಣ್‌ಪ್ರೀತ್ ಸಿಂಗ್ ಮತ್ತು ಕಮಲ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಮೂವರು ಕೂಡ 20 ವರ್ಷ ವಯಸ್ಸಿನವರಾಗಿದ್ದಾರೆ. ಅವರನ್ನು ಎಡ್ಮಂಟನ್‌ನಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಗ್ಲೋಬಲ್ ನ್ಯೂಸ್‌ನ ವರದಿಯ ಪ್ರಕಾರ ಶಂಕಿತರು ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಪ್ರವೇಶಿಸಿದ್ದಾರೆ. ಹರ್ದಿಪ್‌ ನಿಜ್ಜರ್‌ ಹತ್ಯೆಗೆ ಸಂಬಂಧಿಸಿ ಕೆನಡಾ ಪೊಲೀಸರು ಶುಕ್ರವಾರ ಬಾಡಿಗೆ ಹಂತಕರ ತಂಡದ ಸದಸ್ಯರನ್ನು ಬಂಧಿಸಿದೆ ಎಂದು ಕೆನಡಾ ಬ್ರಾಡ್ ಸ್ಟಿಂಗ್ ಕಾರ್ಪೊರೇಷನ್ ಕೂಡ ವರದಿ ಮಾಡಿದೆ.

ಕಳೆದ ವರ್ಷ ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಿಜ್ಜರ್ ಹತ್ಯೆಯು ಸಮಸ್ಯೆ ಸೃಷ್ಟಿಸಿದೆ ಮತ್ತು ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೆನಡಾ ಪ್ರಧಾನಿ ಟ್ರುಡೊ ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿದ್ದರು. ನಿಜ್ಜರ್ ಹತ್ಯೆಯ ಕುರಿತು ಕೆನಡಾ ಪ್ರಧಾನ ಮಂತ್ರಿ ಟ್ರುಡೊ ಭಾರತವನ್ನು ಗುರಿಯಾಗಿಸಿ ನೀಡುತ್ತಿರುವ ಪುನರಾವರ್ತಿತ ಹೇಳಿಕೆಗೆ ಭಾರತ ವಿರೋಧಿಸಿದೆ.

ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ನಿಜ್ಜರ್ ಹತ್ಯೆಯ ಉದ್ದೇಶಿತ ವಿಡಿಯೋ ದೃಶ್ಯಾವಳಿಗಳು ಈ ಮೊದಲು ವೈರಲ್‌ ಆಗಿತ್ತು.  ಹರ್ದೀಪ್ ಸಿಂಗ್ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿರುವ ವಿಡಿಯೋವನ್ನು ಕೆನಡಾ ಮೂಲದ ಸಿಬಿಸಿ ನ್ಯೂಸ್ ವರದಿ ಮಾಡಿತ್ತು.

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...