Homeಅಂತರಾಷ್ಟ್ರೀಯಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು, ಅವರ ಮೇಲೆ ತೀವ್ರ ಕಣ್ಗಾವಲು ಇರಿಸಲಾಗಿತ್ತು ಎಂದು ಸಿಬಿಸಿ ಹೇಳಿದೆ. ಶಂಕಿತರು ಕೆನಡಾದಲ್ಲಿ ವಾಸಿಸುತ್ತಿದ್ದರು. ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಹೊರಗೆ ನಿಜ್ಜರ್ ಹತ್ಯೆಯಲ್ಲಿ ಈ ಮೂವರು ಶೂಟರ್‌, ಡ್ರೈವರ್‌ ಮತ್ತು ಸ್ಪಾಟರ್‌ಗಳಾಗಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ ಎಂದು ವರದಿಯಾಗಿದೆ. ಭಾರತ ಸರ್ಕಾರದೊಂದಿಗೆ ಆರೋಪಿಗಳಿಗೆ ಯಾವುದಾದರೂ ಸಂಬಂಧಗಳು ಇದೆಯಾ ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು RCMP ಸೂಪರಿಂಟೆಂಡೆಂಟ್ ಮಂದೀಪ್ ಮೂಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ “ಸಂಭಾವ್ಯ” ಕೈವಾಡದ ಆರೋಪದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದಗೆಟ್ಟಿತ್ತು. ಭಾರತವು ಟ್ರೂಡೊ ಅವರ ಆರೋಪಗಳನ್ನು “ಅಸಂಬದ್ಧ” ಎಂದು ತಳ್ಳಿಹಾಕಿತ್ತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಯೋಜಿತ ನರಹತ್ಯೆ ತನಿಖಾ ತಂಡದ ನೇತೃತ್ವ ವಹಿಸಿದ್ದ ಮಂದೀಪ್ ಮೂಕರ್, ಶಂಕಿತರನ್ನು ಕರಣ್ ಬ್ರಾರ್, ಕರಣ್‌ಪ್ರೀತ್ ಸಿಂಗ್ ಮತ್ತು ಕಮಲ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಮೂವರು ಕೂಡ 20 ವರ್ಷ ವಯಸ್ಸಿನವರಾಗಿದ್ದಾರೆ. ಅವರನ್ನು ಎಡ್ಮಂಟನ್‌ನಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಗ್ಲೋಬಲ್ ನ್ಯೂಸ್‌ನ ವರದಿಯ ಪ್ರಕಾರ ಶಂಕಿತರು ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಪ್ರವೇಶಿಸಿದ್ದಾರೆ. ಹರ್ದಿಪ್‌ ನಿಜ್ಜರ್‌ ಹತ್ಯೆಗೆ ಸಂಬಂಧಿಸಿ ಕೆನಡಾ ಪೊಲೀಸರು ಶುಕ್ರವಾರ ಬಾಡಿಗೆ ಹಂತಕರ ತಂಡದ ಸದಸ್ಯರನ್ನು ಬಂಧಿಸಿದೆ ಎಂದು ಕೆನಡಾ ಬ್ರಾಡ್ ಸ್ಟಿಂಗ್ ಕಾರ್ಪೊರೇಷನ್ ಕೂಡ ವರದಿ ಮಾಡಿದೆ.

ಕಳೆದ ವರ್ಷ ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಿಜ್ಜರ್ ಹತ್ಯೆಯು ಸಮಸ್ಯೆ ಸೃಷ್ಟಿಸಿದೆ ಮತ್ತು ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೆನಡಾ ಪ್ರಧಾನಿ ಟ್ರುಡೊ ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿದ್ದರು. ನಿಜ್ಜರ್ ಹತ್ಯೆಯ ಕುರಿತು ಕೆನಡಾ ಪ್ರಧಾನ ಮಂತ್ರಿ ಟ್ರುಡೊ ಭಾರತವನ್ನು ಗುರಿಯಾಗಿಸಿ ನೀಡುತ್ತಿರುವ ಪುನರಾವರ್ತಿತ ಹೇಳಿಕೆಗೆ ಭಾರತ ವಿರೋಧಿಸಿದೆ.

ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ನಿಜ್ಜರ್ ಹತ್ಯೆಯ ಉದ್ದೇಶಿತ ವಿಡಿಯೋ ದೃಶ್ಯಾವಳಿಗಳು ಈ ಮೊದಲು ವೈರಲ್‌ ಆಗಿತ್ತು.  ಹರ್ದೀಪ್ ಸಿಂಗ್ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿರುವ ವಿಡಿಯೋವನ್ನು ಕೆನಡಾ ಮೂಲದ ಸಿಬಿಸಿ ನ್ಯೂಸ್ ವರದಿ ಮಾಡಿತ್ತು.

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...