Homeಅಂತರಾಷ್ಟ್ರೀಯಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ" - ಜಸ್ಟಿನ್ ಟ್ರೂಡೊ

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಭಾರತೀಯ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಬಹಿರಂಗ ಬೆಂಬಲ ನೀಡಿ ಭಾರತದ ಸರ್ಕಾರದ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಈಗ ಮತ್ತೊಮ್ಮೆ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೆ ಇಂದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದಾರೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಮಂಗಳವಾರ ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದರು.

ಭಾರತದ ರೈತರು ನಡೆಸುತ್ತಿರುವ ಹೋರಾಟಕ್ಕೆ ದೇಶ-ವಿದೇಶದಿಮದ ವ್ಯಾಪಕ ಬೆಂಬಲ ಹರಿದುಬರುತ್ತಿದೆ. ಇಂಗ್ಲೆಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೆಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೆಂಡ್‌‌‌‌ನ 36 ಸಂಸದರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...