Homeಅಂತರಾಷ್ಟ್ರೀಯಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ" - ಜಸ್ಟಿನ್ ಟ್ರೂಡೊ

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಭಾರತೀಯ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಬಹಿರಂಗ ಬೆಂಬಲ ನೀಡಿ ಭಾರತದ ಸರ್ಕಾರದ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಈಗ ಮತ್ತೊಮ್ಮೆ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೆ ಇಂದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದಾರೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಮಂಗಳವಾರ ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದರು.

ಭಾರತದ ರೈತರು ನಡೆಸುತ್ತಿರುವ ಹೋರಾಟಕ್ಕೆ ದೇಶ-ವಿದೇಶದಿಮದ ವ್ಯಾಪಕ ಬೆಂಬಲ ಹರಿದುಬರುತ್ತಿದೆ. ಇಂಗ್ಲೆಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೆಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೆಂಡ್‌‌‌‌ನ 36 ಸಂಸದರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...