Homeಅಂತರಾಷ್ಟ್ರೀಯಕೆನಡಾವನ್ನು ತಟ್ಟಿದ ತಾಪಮಾನದ ಬಿಸಿ: ಉಷ್ಣಾಂಶದಲ್ಲಿ ತೀವ್ರ ಏರಿಕೆ

ಕೆನಡಾವನ್ನು ತಟ್ಟಿದ ತಾಪಮಾನದ ಬಿಸಿ: ಉಷ್ಣಾಂಶದಲ್ಲಿ ತೀವ್ರ ಏರಿಕೆ

- Advertisement -
- Advertisement -

ಜಗತ್ತಿನ ಅತ್ಯಂತ ಶೀತ ರಾಷ್ಟ್ರಗಳಲ್ಲಿ ಕೆನಡಾ, ನ್ಯೂಜಿಲೆಂಡ್ ಮತ್ತು ನಾರ್ವೆಯನ್ನು ಪರಿಗಣಿಸಲಾಗುತ್ತದೆ. ಎಂತಹ ಬಿರುಬೇಸಿಗೆಯಲ್ಲೂ ಈ ದೇಶಗಳಲ್ಲಿ ಚಳಿಯ ವಾತಾವರಣವಿರುತ್ತದೆ. ಭಾರತ ಮುಂತಾದ ದೇಶಗಳಿಂದ ಕೆನಡಾದಲ್ಲಿ ನೆಲೆಸಿರುವವರಿಗೆ ಬೇಸಿಗೆಯಲ್ಲೂ ಚಳಿಗಾಲದ ಅನುಭವವಾಗುತ್ತದೆ.  ಜೂನ್-ಜುಲೈ ಬೇಸಿಗೆಯ ತಿಂಗಳುಗಳಲ್ಲೂ ಉಷ್ಣಾಂಶ ಅತಿಯೆನಿಸುವುದಿಲ್ಲ.

ಜಾಗತಿಕ ತಾಪಮಾನ ಏರಿಕೆಯಿಂದ ಇತ್ತೀಚಿನ ದಶಕಗಳಲ್ಲಿ ಯುರೋಪ್, ಅಮೆರಿಕಾ ಮತ್ತು ಉತ್ತರ ದಕ್ಷಿಣ ದ್ರುವಗಳ ತಾಪಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವರ್ಷದಿಂದ ವರ್ಷಕ್ಕೆ 1-2 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚುತ್ತಲೇ ಇದೆ. ಉತ್ತರ ದ್ರುವದ ತುದಿಯಲ್ಲಿಯಲ್ಲಿರುವ ಕೆನಡಾ ದೇಶದ ಹವಮಾನದಲ್ಲೂ  ಸಾಕಷ್ಟು ಬದಲಾವಣೆಗಳಾಗಿದ್ದು ವಿಪರೀತ ಉಷ್ಣಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಕಳೆದ ಮೂರುದಿನಗಳಿಂದ ಕೆನಡಾ ದೇಶದಲ್ಲಿ ಒಣ ಹವೆ ಮುಂದುವರೆದಿದ್ದು ಉಷ್ಣಾಂಶ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಸಾಮಾನ್ಯವಾಗಿ ಜುಲೈ ತಿಂಗಳಿನಲ್ಲಿ ಮಾತ್ರ ಈ ಬಗೆಯ ತಾಪಮಾನವನ್ನು ಕಾಣುತ್ತಿದ್ದ ಕೆನಡಾ ದೇಶ ಈ ವರ್ಷ ಜೂನ್‌ ಅತ್ಯಂತ ವೇಳೆಗೆ 50 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನ ಉಷ್ಣತೆಯಲ್ಲಿ ಬೇಯತೊಡಗಿದೆ. ನಿನ್ನೆ ಸಂಜೆ 4:20 ರ ಸಮಯದಲ್ಲಿ ಕೆನಡಾ ದೇಶದ ಲಿಟ್ಟೊನ್ ಕ್ಲೈಮೇಟ್‌ ಸ್ಟೇಷನ್‌ನಲ್ಲಿ 49.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಮೂಲಕ ಇದುವರೆಗಿನ ಎಲ್ಲಾ ದಾಖಲೆಗಳು ಮುರಿದಿವೆ.

ಕೆನಡಾದ ವಾತಾವರಣ ಮತ್ತು ಪರಿಸರ ಬದಲಾವಣೆ ಇಲಾಖೆ ಹೇಳಿಕೆಯನ್ನು ಬಿಡುಗಡೆ ಮಾಡಿ ಸತತ ಮೂರುದಿನಗಳಿಂದ ದೇಶದ ಹವಮಾನದಲ್ಲಿ ತೀವ್ರ ಉಷ್ಣತೆ ದಾಖಲಾಗಿದ್ದು ಇದು ಆತಂಕಕಾರಿ ಬೆಳವಣಿಗೆ ಎಂದಿದೆ.

ಪಶ್ಚಿಮ ಕೆನಡಾ, ವಾಯುವ್ಯ ಕೆನಡಾ ಮತ್ತು ಅಮೆರಿಕ ಪೆಸಿಫಿಕ್ ಭಾಗಗಳು ಬಿರು ಬೇಸಿಗೆಯ ಬೇಗೆಯಲ್ಲಿ ಬೇಯುತ್ತಿದ್ದು ಬ್ರಿಟಿಷ್ ಕೊಲಂಬಿಯಾದ ಲಿಟನ್ ನಗರದಲ್ಲಿ ಇದುವರೆಗಿನ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...