Homeಅಂತರಾಷ್ಟ್ರೀಯಏಪ್ರಿಲ್‌ನ್ನು"ದಲಿತ ಇತಿಹಾಸದ ತಿಂಗಳು" ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

- Advertisement -
- Advertisement -

ಕೆನಡಾದ ಒಂಟಾರಿಯೊ ಪ್ರಾಂತ್ಯದ ಬರ್ಲಿಂಗ್ಟನ್ ನಗರವು ಮಹತ್ವದ ಹೆಜ್ಜೆಯನ್ನು ಇಟ್ಟುಕೊಂಡಿದ್ದು,  ಅಧಿಕೃತವಾಗಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದೆ ಮತ್ತು ಏಪ್ರಿಲ್ 14ರಂದು ಡಾ ಬಿಆರ್ ಅಂಬೇಡ್ಕರ್‌ ‘ಡೇ ಆಫ್‌ ಇಕ್ವಿಟಿ'(ಅಂಬೇಡ್ಕರ್ ಜಯಂತಿ) ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದೆ.

ಮಾರ್ಚ್ 20ರಂದು ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ದಲಿತ ಸಮುದಾಯಗಳಿಗೆ ಏಪ್ರಿಲ್‌ನ ಮಹತ್ವವನ್ನು ಪರಿಗಣಿಸಿ, ಪ್ರಮುಖ ಭಾರತದ ಸಂವಿಧಾನದ ಶಿಲ್ಪಿ ಮತ್ತು ಸಮಾಜ ಸುಧಾರಕರಾದ ಡಾ.ಭೀಮ್ ರಾವ್ ಅಂಬೇಡ್ಕರ್ ಜನ್ಮದಿನ ಮತ್ತು ಜ್ಯೋತಿರಾವ್ ಫುಲೆ ಅವರ ಮರಣದ ವಾರ್ಷಿಕೋತ್ಸವವನ್ನು ಪರಿಗಣಿಸಿ ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಾತಿ ಆಧಾರಿತ ವ್ಯವಸ್ಥಿತ ತಾರತಮ್ಯದ ವಿರುದ್ಧದ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಭೀಮ್ ರಾವ್ ಅಂಬೇಡ್ಕರ್ ಮತ್ತು ಜ್ಯೋತಿರಾವ್ ಫುಲೆ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವಗಳನ್ನು ಒಳಗೊಂಡಿರುವ ಹಿನ್ನೆಲೆ ಏಪ್ರಿಲ್ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ. ಆದ್ದರಿಂದ ಏಪ್ರಿಲ್ 2024ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸುತ್ತೇನೆ ಎಂದು ಬರ್ಲಿಂಗ್ಟನ್ ನಗರದ ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ಹೇಳಿದ್ದಾರೆ.

ನಾನು ಬರ್ಲಿಂಗ್ಟನ್ ನಗರದಲ್ಲಿ ಏಪ್ರಿಲ್ 2024ನ್ನು “ದಲಿತ ಇತಿಹಾಸ ತಿಂಗಳು” ಎಂದು ಘೋಷಿಸುತ್ತೇನೆ ಮತ್ತು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಮೇಯರ್ ಹೊರಡಿಸಿರುವ ಮತ್ತೊಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು 2022ರಲ್ಲಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಗೊತ್ತುಪಡಿಸಿದ ಉತ್ತರ ಅಮೆರಿಕಾದ ಮೊತ್ತ ಮೊದಲ ಪ್ರಾಂತ್ಯವಾಗಿದೆ. ಬ್ರಿಟಿಷ್ ಕೊಲಂಬಿಯಾದ ಬರ್ನಾಬಿ ಎಂಬ ನಗರವು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ.

ಇದನ್ನು ಓದಿ: ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...