Homeಅಂತರಾಷ್ಟ್ರೀಯಏಪ್ರಿಲ್‌ನ್ನು"ದಲಿತ ಇತಿಹಾಸದ ತಿಂಗಳು" ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

- Advertisement -
- Advertisement -

ಕೆನಡಾದ ಒಂಟಾರಿಯೊ ಪ್ರಾಂತ್ಯದ ಬರ್ಲಿಂಗ್ಟನ್ ನಗರವು ಮಹತ್ವದ ಹೆಜ್ಜೆಯನ್ನು ಇಟ್ಟುಕೊಂಡಿದ್ದು,  ಅಧಿಕೃತವಾಗಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದೆ ಮತ್ತು ಏಪ್ರಿಲ್ 14ರಂದು ಡಾ ಬಿಆರ್ ಅಂಬೇಡ್ಕರ್‌ ‘ಡೇ ಆಫ್‌ ಇಕ್ವಿಟಿ'(ಅಂಬೇಡ್ಕರ್ ಜಯಂತಿ) ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದೆ.

ಮಾರ್ಚ್ 20ರಂದು ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ದಲಿತ ಸಮುದಾಯಗಳಿಗೆ ಏಪ್ರಿಲ್‌ನ ಮಹತ್ವವನ್ನು ಪರಿಗಣಿಸಿ, ಪ್ರಮುಖ ಭಾರತದ ಸಂವಿಧಾನದ ಶಿಲ್ಪಿ ಮತ್ತು ಸಮಾಜ ಸುಧಾರಕರಾದ ಡಾ.ಭೀಮ್ ರಾವ್ ಅಂಬೇಡ್ಕರ್ ಜನ್ಮದಿನ ಮತ್ತು ಜ್ಯೋತಿರಾವ್ ಫುಲೆ ಅವರ ಮರಣದ ವಾರ್ಷಿಕೋತ್ಸವವನ್ನು ಪರಿಗಣಿಸಿ ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಾತಿ ಆಧಾರಿತ ವ್ಯವಸ್ಥಿತ ತಾರತಮ್ಯದ ವಿರುದ್ಧದ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಭೀಮ್ ರಾವ್ ಅಂಬೇಡ್ಕರ್ ಮತ್ತು ಜ್ಯೋತಿರಾವ್ ಫುಲೆ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವಗಳನ್ನು ಒಳಗೊಂಡಿರುವ ಹಿನ್ನೆಲೆ ಏಪ್ರಿಲ್ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ. ಆದ್ದರಿಂದ ಏಪ್ರಿಲ್ 2024ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸುತ್ತೇನೆ ಎಂದು ಬರ್ಲಿಂಗ್ಟನ್ ನಗರದ ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ಹೇಳಿದ್ದಾರೆ.

ನಾನು ಬರ್ಲಿಂಗ್ಟನ್ ನಗರದಲ್ಲಿ ಏಪ್ರಿಲ್ 2024ನ್ನು “ದಲಿತ ಇತಿಹಾಸ ತಿಂಗಳು” ಎಂದು ಘೋಷಿಸುತ್ತೇನೆ ಮತ್ತು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಮೇಯರ್ ಹೊರಡಿಸಿರುವ ಮತ್ತೊಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು 2022ರಲ್ಲಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಗೊತ್ತುಪಡಿಸಿದ ಉತ್ತರ ಅಮೆರಿಕಾದ ಮೊತ್ತ ಮೊದಲ ಪ್ರಾಂತ್ಯವಾಗಿದೆ. ಬ್ರಿಟಿಷ್ ಕೊಲಂಬಿಯಾದ ಬರ್ನಾಬಿ ಎಂಬ ನಗರವು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ.

ಇದನ್ನು ಓದಿ: ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...