Homeಅಂತರಾಷ್ಟ್ರೀಯಏಪ್ರಿಲ್‌ನ್ನು"ದಲಿತ ಇತಿಹಾಸದ ತಿಂಗಳು" ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

- Advertisement -
- Advertisement -

ಕೆನಡಾದ ಒಂಟಾರಿಯೊ ಪ್ರಾಂತ್ಯದ ಬರ್ಲಿಂಗ್ಟನ್ ನಗರವು ಮಹತ್ವದ ಹೆಜ್ಜೆಯನ್ನು ಇಟ್ಟುಕೊಂಡಿದ್ದು,  ಅಧಿಕೃತವಾಗಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದೆ ಮತ್ತು ಏಪ್ರಿಲ್ 14ರಂದು ಡಾ ಬಿಆರ್ ಅಂಬೇಡ್ಕರ್‌ ‘ಡೇ ಆಫ್‌ ಇಕ್ವಿಟಿ'(ಅಂಬೇಡ್ಕರ್ ಜಯಂತಿ) ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದೆ.

ಮಾರ್ಚ್ 20ರಂದು ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ದಲಿತ ಸಮುದಾಯಗಳಿಗೆ ಏಪ್ರಿಲ್‌ನ ಮಹತ್ವವನ್ನು ಪರಿಗಣಿಸಿ, ಪ್ರಮುಖ ಭಾರತದ ಸಂವಿಧಾನದ ಶಿಲ್ಪಿ ಮತ್ತು ಸಮಾಜ ಸುಧಾರಕರಾದ ಡಾ.ಭೀಮ್ ರಾವ್ ಅಂಬೇಡ್ಕರ್ ಜನ್ಮದಿನ ಮತ್ತು ಜ್ಯೋತಿರಾವ್ ಫುಲೆ ಅವರ ಮರಣದ ವಾರ್ಷಿಕೋತ್ಸವವನ್ನು ಪರಿಗಣಿಸಿ ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಾತಿ ಆಧಾರಿತ ವ್ಯವಸ್ಥಿತ ತಾರತಮ್ಯದ ವಿರುದ್ಧದ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ.ಭೀಮ್ ರಾವ್ ಅಂಬೇಡ್ಕರ್ ಮತ್ತು ಜ್ಯೋತಿರಾವ್ ಫುಲೆ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವಗಳನ್ನು ಒಳಗೊಂಡಿರುವ ಹಿನ್ನೆಲೆ ಏಪ್ರಿಲ್ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ. ಆದ್ದರಿಂದ ಏಪ್ರಿಲ್ 2024ನ್ನು “ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸುತ್ತೇನೆ ಎಂದು ಬರ್ಲಿಂಗ್ಟನ್ ನಗರದ ಮೇಯರ್ ಮರಿಯಾನ್ನೆ ಮೀಡ್ ವಾರ್ಡ್ ಹೇಳಿದ್ದಾರೆ.

ನಾನು ಬರ್ಲಿಂಗ್ಟನ್ ನಗರದಲ್ಲಿ ಏಪ್ರಿಲ್ 2024ನ್ನು “ದಲಿತ ಇತಿಹಾಸ ತಿಂಗಳು” ಎಂದು ಘೋಷಿಸುತ್ತೇನೆ ಮತ್ತು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಮೇಯರ್ ಹೊರಡಿಸಿರುವ ಮತ್ತೊಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು 2022ರಲ್ಲಿ ಏಪ್ರಿಲ್‌ನ್ನು “ದಲಿತ ಇತಿಹಾಸದ ತಿಂಗಳು” ಎಂದು ಗೊತ್ತುಪಡಿಸಿದ ಉತ್ತರ ಅಮೆರಿಕಾದ ಮೊತ್ತ ಮೊದಲ ಪ್ರಾಂತ್ಯವಾಗಿದೆ. ಬ್ರಿಟಿಷ್ ಕೊಲಂಬಿಯಾದ ಬರ್ನಾಬಿ ಎಂಬ ನಗರವು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ.

ಇದನ್ನು ಓದಿ: ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...