Homeಮುಖಪುಟಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

- Advertisement -
- Advertisement -

ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಗೃಹ ಸಚಿವ ಅಮಿತ್ ಅವರ ಕೈವಾಡ ಇದೆ ಎಂದು ಕೆನಡಾ ಸರ್ಕಾರ ನೇರವಾಗಿ ಆರೋಪಿಸಿದೆ.

ಕೆನಡಾ ನೆಲದಲ್ಲಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ದದ ಹಿಂಸಾಚಾರದ ಸಂಚಿನಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿರುವುದನ್ನು ತಾನೇ ಖಚಿತಪಡಿಸಿ ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿಕೆ ನೀಡಿದ್ದಾಗಿ ಕೆನಡಾದ ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಕೆನಡಾದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಡೇವಿಡ್ ಮಾರಿಸನ್ ಹೀಗೆ ಹೇಳಿರುವುದಾಗಿ ವರದಿಯಾಗಿದೆ. ಭಾರತದ ಏಜೆಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು.

ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ (RAW) ಅಧಿಕಾರಿಯೊಬ್ಬರು ಮತ್ತು ಹಿರಿಯ ಸಚಿವರು ಕೆನಡಾದಲ್ಲಿ ಗುಪ್ತವಾಗಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಅಲ್ಲಿ ಸಿಖ್ ಪ್ರತ್ಯೇಖತಾವಾದಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬುವುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು ಪುರಾವೆಗಳನ್ನು ಸಂಗ್ರಹಿಸಿವೆ ಎಂದು ವಾಷಿಂಗ್ಟನ್ ಪೋಸ್ಟ್ ವಾರದ ಹಿಂದೆ ಮೊದಲ ವರದಿ ಮಾಡಿತ್ತು.

ಮೊದಲ ವರದಿಯಲ್ಲಿ ವಾಷಿಂಗ್ಟನ್ ಪೋಸ್ಟ್ ಅಮಿತ್ ಶಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ಭಾರತದ ಹಿರಿಯ ಸಚಿವರು ಮತ್ತು RAWದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಮಾತ್ರ ಹೇಳಿತ್ತು. ನಂತರ ಪರಿಷ್ಕರಿಸಿದ ವರದಿಯಲ್ಲಿ ಅಮಿತ್ ಶಾ ಹೆಸರನ್ನು ನೇರವಾಗಿ ಉಲ್ಲೇಖಿಸಿತ್ತು. ಈ ಮಾಹಿತಿಯನ್ನು ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿದ್ದು ನಾನೇ ಎಂದು ಡೇವಿಡ್ ಮಾರಿಸನ್ ತಿಳಿಸಿದ್ದಾರೆ.

“ಪತ್ರಿಕೆಯವರು ಕರೆ ಮಾಡಿ ಸಿಖ್‌ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನ ಹಿಂದೆ ಇರುವುದು ಅವರೇ (ಅಮಿತ್‌ ಶಾ)? ಎಂದು ಕೇಳಿದ್ದರು. ಅದಕ್ಕೆ ನಾನು ‘ಹೌದು’ ಎಂದು ಉತ್ತರಿಸಿರುವುದಾಗಿ ಸಂಸದೀಯ ಸಮಿತಿಗೆ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಭಾರತೀಯ ಗೃಹ ವ್ಯವಹಾರಗಳ ಸಚಿವ ಕೆನಡಾ ನೆಲದಲ್ಲಿನ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮಾಹಿತಿಯನ್ನು ಕೆನಡಾದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಆದರೂ, ಅದು ವಾಷಿಂಗ್ಟನ್ ಪೋಸ್ಟ್‌ನಲ್ಲಿ ಮಾತ್ರ ಹೇಗೆ ಬಹಿರಂಗಗೊಂಡಿತು ಎಂದು ಕೇಳಲಾಯಿತು. ಆ ಪ್ರಶ್ನೆಗೆ ಉತ್ತರಿಸಿದ ಮಾರಿಸನ್, ತಾನೇ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಭಾರತ ಸರ್ಕಾರದ ಏಜೆಂಟರ ಮೂಲಕ ಕೆನಡಾದಲ್ಲಿ ಚುನಾವಣಾ ಹಸ್ತಕ್ಷೇಪ ಮತ್ತು ಕ್ರಿಮಿನಲ್ ಚಟುವಟಿಕೆಗಳು ನಡೆದಿರುವ ಬಗ್ಗೆಯೂ ಸಮಿತಿ ಸದಸ್ಯರು ಪ್ರಶ್ನೆಗಳನ್ನು ಕೇಳಿದರು. ಸಿಖ್ ಸಮುದಾಯದ ವೋಟ್ ಬ್ಯಾಂಕ್‌ ಭದ್ರಪಡಿಸಿಕೊಳ್ಳುವ ಟ್ರುಡೊ ಅವರ ರಾಜಕೀಯ ಅಜೆಂಡಾ ಇದಾಗಿದೆ ಎಂದು ಈಗಾಗಲೇ ಪ್ರತಿಪಾದಿಸಿರುವ ಭಾರತ, ಟ್ರುಡೋ ದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ : ಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ ಬಲಿ, ಸತ್ತವರಲ್ಲಿ ಮಕ್ಕಳೆ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....