Homeಮುಖಪುಟಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

- Advertisement -
- Advertisement -

ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಗೃಹ ಸಚಿವ ಅಮಿತ್ ಅವರ ಕೈವಾಡ ಇದೆ ಎಂದು ಕೆನಡಾ ಸರ್ಕಾರ ನೇರವಾಗಿ ಆರೋಪಿಸಿದೆ.

ಕೆನಡಾ ನೆಲದಲ್ಲಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ದದ ಹಿಂಸಾಚಾರದ ಸಂಚಿನಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿರುವುದನ್ನು ತಾನೇ ಖಚಿತಪಡಿಸಿ ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿಕೆ ನೀಡಿದ್ದಾಗಿ ಕೆನಡಾದ ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಕೆನಡಾದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಡೇವಿಡ್ ಮಾರಿಸನ್ ಹೀಗೆ ಹೇಳಿರುವುದಾಗಿ ವರದಿಯಾಗಿದೆ. ಭಾರತದ ಏಜೆಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು.

ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ (RAW) ಅಧಿಕಾರಿಯೊಬ್ಬರು ಮತ್ತು ಹಿರಿಯ ಸಚಿವರು ಕೆನಡಾದಲ್ಲಿ ಗುಪ್ತವಾಗಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಅಲ್ಲಿ ಸಿಖ್ ಪ್ರತ್ಯೇಖತಾವಾದಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬುವುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು ಪುರಾವೆಗಳನ್ನು ಸಂಗ್ರಹಿಸಿವೆ ಎಂದು ವಾಷಿಂಗ್ಟನ್ ಪೋಸ್ಟ್ ವಾರದ ಹಿಂದೆ ಮೊದಲ ವರದಿ ಮಾಡಿತ್ತು.

ಮೊದಲ ವರದಿಯಲ್ಲಿ ವಾಷಿಂಗ್ಟನ್ ಪೋಸ್ಟ್ ಅಮಿತ್ ಶಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ಭಾರತದ ಹಿರಿಯ ಸಚಿವರು ಮತ್ತು RAWದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಮಾತ್ರ ಹೇಳಿತ್ತು. ನಂತರ ಪರಿಷ್ಕರಿಸಿದ ವರದಿಯಲ್ಲಿ ಅಮಿತ್ ಶಾ ಹೆಸರನ್ನು ನೇರವಾಗಿ ಉಲ್ಲೇಖಿಸಿತ್ತು. ಈ ಮಾಹಿತಿಯನ್ನು ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿದ್ದು ನಾನೇ ಎಂದು ಡೇವಿಡ್ ಮಾರಿಸನ್ ತಿಳಿಸಿದ್ದಾರೆ.

“ಪತ್ರಿಕೆಯವರು ಕರೆ ಮಾಡಿ ಸಿಖ್‌ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನ ಹಿಂದೆ ಇರುವುದು ಅವರೇ (ಅಮಿತ್‌ ಶಾ)? ಎಂದು ಕೇಳಿದ್ದರು. ಅದಕ್ಕೆ ನಾನು ‘ಹೌದು’ ಎಂದು ಉತ್ತರಿಸಿರುವುದಾಗಿ ಸಂಸದೀಯ ಸಮಿತಿಗೆ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಭಾರತೀಯ ಗೃಹ ವ್ಯವಹಾರಗಳ ಸಚಿವ ಕೆನಡಾ ನೆಲದಲ್ಲಿನ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮಾಹಿತಿಯನ್ನು ಕೆನಡಾದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಆದರೂ, ಅದು ವಾಷಿಂಗ್ಟನ್ ಪೋಸ್ಟ್‌ನಲ್ಲಿ ಮಾತ್ರ ಹೇಗೆ ಬಹಿರಂಗಗೊಂಡಿತು ಎಂದು ಕೇಳಲಾಯಿತು. ಆ ಪ್ರಶ್ನೆಗೆ ಉತ್ತರಿಸಿದ ಮಾರಿಸನ್, ತಾನೇ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಭಾರತ ಸರ್ಕಾರದ ಏಜೆಂಟರ ಮೂಲಕ ಕೆನಡಾದಲ್ಲಿ ಚುನಾವಣಾ ಹಸ್ತಕ್ಷೇಪ ಮತ್ತು ಕ್ರಿಮಿನಲ್ ಚಟುವಟಿಕೆಗಳು ನಡೆದಿರುವ ಬಗ್ಗೆಯೂ ಸಮಿತಿ ಸದಸ್ಯರು ಪ್ರಶ್ನೆಗಳನ್ನು ಕೇಳಿದರು. ಸಿಖ್ ಸಮುದಾಯದ ವೋಟ್ ಬ್ಯಾಂಕ್‌ ಭದ್ರಪಡಿಸಿಕೊಳ್ಳುವ ಟ್ರುಡೊ ಅವರ ರಾಜಕೀಯ ಅಜೆಂಡಾ ಇದಾಗಿದೆ ಎಂದು ಈಗಾಗಲೇ ಪ್ರತಿಪಾದಿಸಿರುವ ಭಾರತ, ಟ್ರುಡೋ ದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ : ಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ ಬಲಿ, ಸತ್ತವರಲ್ಲಿ ಮಕ್ಕಳೆ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...