Homeಮುಖಪುಟಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನಲ್ಲಿ ಅಮಿತ್ ಶಾ ಕೈವಾಡ : ಕೆನಡಾ ಆರೋಪ

- Advertisement -
- Advertisement -

ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಗೃಹ ಸಚಿವ ಅಮಿತ್ ಅವರ ಕೈವಾಡ ಇದೆ ಎಂದು ಕೆನಡಾ ಸರ್ಕಾರ ನೇರವಾಗಿ ಆರೋಪಿಸಿದೆ.

ಕೆನಡಾ ನೆಲದಲ್ಲಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ದದ ಹಿಂಸಾಚಾರದ ಸಂಚಿನಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿರುವುದನ್ನು ತಾನೇ ಖಚಿತಪಡಿಸಿ ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿಕೆ ನೀಡಿದ್ದಾಗಿ ಕೆನಡಾದ ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ಕೆನಡಾದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಡೇವಿಡ್ ಮಾರಿಸನ್ ಹೀಗೆ ಹೇಳಿರುವುದಾಗಿ ವರದಿಯಾಗಿದೆ. ಭಾರತದ ಏಜೆಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು.

ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ (RAW) ಅಧಿಕಾರಿಯೊಬ್ಬರು ಮತ್ತು ಹಿರಿಯ ಸಚಿವರು ಕೆನಡಾದಲ್ಲಿ ಗುಪ್ತವಾಗಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಅಲ್ಲಿ ಸಿಖ್ ಪ್ರತ್ಯೇಖತಾವಾದಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂಬುವುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು ಪುರಾವೆಗಳನ್ನು ಸಂಗ್ರಹಿಸಿವೆ ಎಂದು ವಾಷಿಂಗ್ಟನ್ ಪೋಸ್ಟ್ ವಾರದ ಹಿಂದೆ ಮೊದಲ ವರದಿ ಮಾಡಿತ್ತು.

ಮೊದಲ ವರದಿಯಲ್ಲಿ ವಾಷಿಂಗ್ಟನ್ ಪೋಸ್ಟ್ ಅಮಿತ್ ಶಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ಭಾರತದ ಹಿರಿಯ ಸಚಿವರು ಮತ್ತು RAWದ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಮಾತ್ರ ಹೇಳಿತ್ತು. ನಂತರ ಪರಿಷ್ಕರಿಸಿದ ವರದಿಯಲ್ಲಿ ಅಮಿತ್ ಶಾ ಹೆಸರನ್ನು ನೇರವಾಗಿ ಉಲ್ಲೇಖಿಸಿತ್ತು. ಈ ಮಾಹಿತಿಯನ್ನು ವಾಷಿಂಗ್ಟನ್ ಪೋಸ್ಟ್‌ಗೆ ಹೇಳಿದ್ದು ನಾನೇ ಎಂದು ಡೇವಿಡ್ ಮಾರಿಸನ್ ತಿಳಿಸಿದ್ದಾರೆ.

“ಪತ್ರಿಕೆಯವರು ಕರೆ ಮಾಡಿ ಸಿಖ್‌ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನ ಹಿಂದೆ ಇರುವುದು ಅವರೇ (ಅಮಿತ್‌ ಶಾ)? ಎಂದು ಕೇಳಿದ್ದರು. ಅದಕ್ಕೆ ನಾನು ‘ಹೌದು’ ಎಂದು ಉತ್ತರಿಸಿರುವುದಾಗಿ ಸಂಸದೀಯ ಸಮಿತಿಗೆ ಡೇವಿಡ್ ಮಾರಿಸನ್ ಹೇಳಿದ್ದಾರೆ.

ಭಾರತೀಯ ಗೃಹ ವ್ಯವಹಾರಗಳ ಸಚಿವ ಕೆನಡಾ ನೆಲದಲ್ಲಿನ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮಾಹಿತಿಯನ್ನು ಕೆನಡಾದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಆದರೂ, ಅದು ವಾಷಿಂಗ್ಟನ್ ಪೋಸ್ಟ್‌ನಲ್ಲಿ ಮಾತ್ರ ಹೇಗೆ ಬಹಿರಂಗಗೊಂಡಿತು ಎಂದು ಕೇಳಲಾಯಿತು. ಆ ಪ್ರಶ್ನೆಗೆ ಉತ್ತರಿಸಿದ ಮಾರಿಸನ್, ತಾನೇ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಭಾರತ ಸರ್ಕಾರದ ಏಜೆಂಟರ ಮೂಲಕ ಕೆನಡಾದಲ್ಲಿ ಚುನಾವಣಾ ಹಸ್ತಕ್ಷೇಪ ಮತ್ತು ಕ್ರಿಮಿನಲ್ ಚಟುವಟಿಕೆಗಳು ನಡೆದಿರುವ ಬಗ್ಗೆಯೂ ಸಮಿತಿ ಸದಸ್ಯರು ಪ್ರಶ್ನೆಗಳನ್ನು ಕೇಳಿದರು. ಸಿಖ್ ಸಮುದಾಯದ ವೋಟ್ ಬ್ಯಾಂಕ್‌ ಭದ್ರಪಡಿಸಿಕೊಳ್ಳುವ ಟ್ರುಡೊ ಅವರ ರಾಜಕೀಯ ಅಜೆಂಡಾ ಇದಾಗಿದೆ ಎಂದು ಈಗಾಗಲೇ ಪ್ರತಿಪಾದಿಸಿರುವ ಭಾರತ, ಟ್ರುಡೋ ದೊಡ್ಡ ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ : ಗಾಜಾದಲ್ಲಿ ಮುಂದುವರಿದ ಇಸ್ರೇಲ್ ಮಾರಣಹೋಮ; ವಸತಿ ಕಟ್ಟಡದ ಮೇಲೆ ದಾಳಿಗೆ 100 ಕ್ಕೂ ಹೆಚ್ಚು ಮಂದಿ ಬಲಿ, ಸತ್ತವರಲ್ಲಿ ಮಕ್ಕಳೆ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...