Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....