Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...