Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...