ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ವಿರುದ್ದ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ FIR ದಾಖಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಕೇಶ್ ಟಿಕಾಯತ್ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
“ರೈತನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿರುವುದು ಖಂಡನೀಯ. ತಾನೊಬ್ಬ ರೈತನಾಯಕನೆಂದು ಬಿಂಬಿಸುತ್ತಾ ಮುಖ್ಯಮಂತ್ರಿ ಪಟ್ಟಕ್ಕೇರಿರುವ ಯಡಿಯೂರಪ್ಪ ಅವರ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ತಕ್ಷಣ ಈ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ” ಎಂದು ಒತ್ತಾಯಿಸಿದ್ದಾರೆ.
ರೈತವಿರೋಧಿ @BJP4India ಅವರಿಗೆ ಕರಾಳ ಕೃಷಿಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತಶಕ್ತಿಯನ್ನು ಹಣಿಯಬಹುದೆಂದು @BJP4Karnataka ತಿಳಿದುಕೊಂಡಿದ್ದರೆ ಅದು ಭ್ರಮೆ. 2/2
— Siddaramaiah (@siddaramaiah) March 25, 2021
“ರೈತವಿರೋಧಿ ಬಿಜೆಪಿ ಪಕ್ಷದವರಿಗೆ ಅವರಿಗೆ ಕರಾಳ ಕೃಷಿಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತಶಕ್ತಿಯನ್ನು ಹಣಿಯಬಹುದೆಂದು ರಾಜ್ಯ ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣದ ದಾಖಲಾಗಿದೆ.
ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ


