Homeಮುಖಪುಟಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿತ್ತು.

- Advertisement -
- Advertisement -

ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮರಾಠಾ ಮೀಸಲಾತಿಯನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇದನ್ನು ಅಸಂವಿಧಾನಿಕ ಎಂದು ಬುಧವಾರ ಹೇಳಿದೆ. ಶೇ. 50 ರ ಗರಿಷ್ಠ ಮಿತಿಯನ್ನು ಮತ್ತೆ ಪರಿಶೀಲಿಸುವ ಅಗತ್ಯ ಇಲ್ಲ ಎಂದೂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು, ಮಹಾರಾಷ್ಟ್ರ ಸರ್ಕಾರವು ಮೀಸಲಾತಿಯ ಶೇ. 50 ರ ಗರಿಷ್ಠ ಮಿತಿಯನ್ನು ಮುರಿಯಲು ಯಾವುದೇ ಅಸಾಮಾನ್ಯ ಸನ್ನಿವೇಶಗಳಿಲ್ಲ ಎಂದು ಹೇಳಿದೆ.

ರಾಜ್ಯದಲ್ಲಿ ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ 2018 ರ ಕ್ರಮವನ್ನು ಸುಪ್ರೀಂಕೋರ್ಟ್ ಬುಧವಾರ ರದ್ದುಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ: ಮೀಸಲಾತಿ: ತುಷ್ಟೀಕರಣದ ತಂತ್ರವಾಗುತ್ತಿರುವ ಸಮಾನತೆಯ ಅಸ್ತ್ರ: ಎ ನಾರಾಯಣ

ಸಮುದಾಯವೊಂದಕ್ಕೆ ಪ್ರತ್ಯೇಕ ಮೀಸಲಾತಿ ನೀಡುವ ಕ್ರಮವನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ ಎಂದು ಪಿಟಿಐ ತಿಳಿಸಿದೆ.

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ಹೋರಾಟ ಇನ್ನೂ ಚಾಲನೆಲ್ಲಿದೆ. ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದೆ. ಇದನ್ನು ಸಾಧಿಸಲು ಶೇ. 50 ರ ಗರಿಷ್ಠ ಮಿತಿಯನ್ನು ಉಲ್ಲಂಘಿಸಬೇಕಾಗುತ್ತದೆ. ನ್ಯಾಯಾಲಯಗಳ ಈ ನಿರ್ಬಂಧನೆಯಿಂದ ಪಾರಾಗಲು ಸಂಸತ್ತಿನ ಅನುಮೋದನೆ ಪಡೆಯಬೇಕಾಗುತ್ತದೆ. ಈ ಹಿಂದೆ ಈ ಸಾಹಸ ಮಾಡಿ ಯಶಸ್ವಿಯಾದ ತಮಿಳುನಾಡು ಅಲ್ಲಿ ಶೇ.69 ಪ್ರಮಾಣದ ಮೀಸಲಾತಿ ನಿಗದಿ ಮಾಡಿದೆ.

ದೇಶದ ಜನಸಂಖ್ಯೆಯ ಶೇ. 24 ರಷ್ಟಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಈಗ ಶೇ. 18 ಮೀಸಲಾತಿ ಸಿಗುತ್ತಿದೆ. ಈ ಸಮುದಾಯಗಳಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ಇತರೆ ಹಿಂದುಳಿದ ವರ್ಗದ (ಒಬಿಸಿ) ಸಮುದಾಯಗಳಿಗೂ ನ್ಯಾಯಯುತ ಪಾಲು ಸಿಕ್ಕಿಲ್ಲ ಎಂದು ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ಪ್ರಗತಿಪರ ಸಂಘಟನೆಗಳ ನಾಯಕರು ಆಕ್ಷೇಪ ಎತ್ತುತ್ತಲೇ ಬಂದಿದ್ದಾರೆ.

ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಶೇ. 50 ರಷ್ಟು ಮೀಸಲಾತಿ ಅಂದರೆ, ಸಾಪೇಕ್ಷವಾಗಿ ಅಲ್ಪಸಂಖ್ಯಾತರಾದ (ಜನಸಂಖ್ಯೆಯಲ್ಲಿ ಎಸ್‌ಸಿ-ಎಸ್‌ಟಿ-ಒಬಿಸಿಗಳಿಗಿಂತ ಕಡಿಮೆ ಇರುವ) ಮುಂದುವರೆದ ಮೇಲ್ವರ್ಗ ಮತ್ತು ಮೇಲ್ಜಾತಿಗಳಿಗೆ ಉಳಿದ ಶೇ. 50 ರಷ್ಟು ಮೀಸಲಾತಿ ನೀಡಿದಂತೆ ಆಗುತ್ತದೆ ಎಂಬ ವಾದವೂ ಇದೆ.

ಈ ನಡುವೆ ಕಳೆದ ವರ್ಷ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ಕಲ್ಪಿಸಿದ್ದು, ಶೇ.3 ರಷ್ಟು ಇರುವ ಬ್ರಾಹ್ಮಣರಿಗಷ್ಟೇ ಅನುಕೂಲವಾಗುತ್ತಿದೆ.

ಹೀಗಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬ ವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಸುಪ್ರೀಂಕೋರ್ಟಿನ ನಿನ್ನೆಯ ಆದೇಶ ಕುರಿತು ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
’ಅಸಾಮಾನ್ಯ ಸಂದರ್ಭಗಳಲ್ಲಿ’ ಗರಿಷ್ಠ ಮಿತಿ ದಾಟಬಹುದು ಎಂಬ ಸುಪ್ರೀಂಕೋರ್ಟ್ ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಕೆಲವು ತಜ್ಞರು, ಈ ’ಅಸಾಮಾನ್ಯ ಸಂದರ್ಭ-ಸನ್ನಿವೇಶ’ದ ವ್ಯಾಖ್ಯಾನವೇ ಆಗಿಲ್ಲ ಎನ್ನುತ್ತಾರೆ.

ಕೋರ್ಟ್ ನಿಲುವೇನು?

1992 ರ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಶೇ.50 ಕೋಟಾ ಮಿತಿಯನ್ನು ಉಲ್ಲಂಘಿಸಿದೆ ಎನ್ನಲಾದ ‘ಮಹಾರಾಷ್ಟ್ರ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ-2018’ ಯನ್ನು ಪ್ರಶ್ನಿಸಿದ ಒಂದು ಗುಂಪಿನ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಬುಧವಾರದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್. ನಾಗೇಶ್ವರ ರಾವ್, ಎಸ್. ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಅವರ ಸಂವಿಧಾನ ಪೀಠವು, ಮಹಾರಾಷ್ಟ್ರದಲ್ಲಿ ಹಿಂದಿನ ಭಾರತೀಯ ಜನತಾ ಪಕ್ಷ ಸರ್ಕಾರವು ತಂದಿರುವ ಮೀಸಲಾತಿ ಕ್ರಮವು ಸಮಾನತೆಯ ತತ್ವಗಳನ್ನು ಉಲ್ಲಂಘಿಸಿದೆ ಎಂದು ತಿಳಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

“ಗಾಯಕವಾಡ್ ಆಯೋಗ ಅಥವಾ ಹೈಕೋರ್ಟ್ ಎರಡೂ ಮರಾಠರಿಗೆ 50% ಮೀಸಲಾತಿಯನ್ನು ಮೀರಿದ ಯಾವುದೇ ಪರಿಸ್ಥಿತಿಯನ್ನು ಸೂಚಿಸಿಲ್ಲ” ಎಂದು ಭೂಷಣ್ ನೇತೃತ್ವದ ನ್ಯಾಯಪೀಠ ಸರ್ವಾನುಮತದಿಂದ ಘೋಷಿಸಿತು.

“ಆದ್ದರಿಂದ, ಗರಿಷ್ಠ ಮಿತಿಯನ್ನು ಮೀರಲು ಯಾವುದೇ ಅಸಾಮಾನ್ಯ ಸಂದರ್ಭಗಳಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಪೀಠ ಸ್ಪಷ್ಟಪಡಿಸಿದೆ.

ಈ ತೀರ್ಪು 2020 ರ ಸೆಪ್ಟೆಂಬರ್ 9 ರವರೆಗೆ ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ದಾಖಲಾತಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ಮೀಸಲಾತಿ ಮಿತಿಯನ್ನು ಶೇ.50 ಎಂದು ನಿಗದಿಪಡಿಸಿದ 1992 ರ ಇಂದಿರಾ ಸಾಹ್ನಿ ತೀರ್ಪನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. “ಈ ತೀರ್ಪನ್ನು ಈ ನ್ಯಾಯಾಲಯವು ಪದೇ ಪದೇ ಅನುಸರಿಸುತ್ತಿದೆ ಮತ್ತು ಈ ನ್ಯಾಯಾಲಯದ ಕನಿಷ್ಠ ನಾಲ್ಕು ಸಂವಿಧಾನ ಪೀಠಗಳಿಂದ ಅನುಮೋದನೆ ಪಡೆದಿದೆ” ಎಂದು ಅದು ಹೇಳಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ತೀರ್ಪನ್ನು “ದುರದೃಷ್ಟಕರ” ಎಂದು ಕರೆದಿದ್ದಾರೆ ಎಂದ ಎನ್‌ಐ ವರದಿ ಮಾಡಿದೆ. ಸಮುದಾಯದ ಸದಸ್ಯರಿಗಾಗಿ “ಸ್ವಾಭಿಮಾನದ ಜೀವನ”ದ ಸಲುವಾಗಿ ಸರ್ವಾನುಮತದಿಂದ ಶಾಸನವನ್ನು ಅಂಗೀಕರಿಸಲಾಗಿದೆ ಎಂದು ಠಾಕ್ರೆ ಹೇಳಿದರು. “ಈಗ ಸುಪ್ರೀಂಕೋರ್ಟ್ ಮಹಾರಾಷ್ಟ್ರವು ಈ ಬಗ್ಗೆ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತದೆ, ಪ್ರಧಾನಿ ಮತ್ತು ಅಧ್ಯಕ್ಷರಿಗೆ ಮಾತ್ರ ಸಾಧ್ಯ” ಎಂದು ಅವರು ಹೇಳಿದರು.

2018 ರಲ್ಲಿ, ರಾಜ್ಯವ್ಯಾಪಿ ನಡೆದ ಮರಾಠಾ ಮೀಸಲಾತಿ ಹೋರಾಟದ ಆಗ್ರಹಕ್ಕೆ ಮಣಿದಿದ್ದ ಮಹಾರಾಷ್ಟ್ರದ ಅಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರವು ಮರಾಠರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.18 ಮೀಸಲಾತಿಯನ್ನು ಅನುಮೋದಿಸಿತ್ತು. 2019 ರಲ್ಲಿ ಈ ಕ್ರಮದ ವಿರುದ್ಧ ಅರ್ಜಿಗಳನ್ನು ವಿಚಾರನಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು, ಆದರೆ ಶೇ.18 ಮೀಸಲಾತಿ ಸಮರ್ಥನೀಯವಲ್ಲ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸುಗಳ ಪ್ರಕಾರ ಕೋಟಾವನ್ನು ಶೇ.12 -13 ಕ್ಕೆ ಇಳಿಸುವಂತೆ ಅದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಹೈಕೋರ್ಟ್‌ನ ತೀರ್ಪನ್ನು ತರುವಾಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅದು 2020 ರ ಸೆಪ್ಟೆಂಬರ್‌ನಲ್ಲಿ ತೀರ್ಪನ್ನು ತಡೆಹಿಡಿಯಿತು. ನಂತರ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನೋಟಿಸ್ ನೀಡಿ, ಶೇ. 50 ರ ಮಿತಿಯನ್ನು ಮೀರಿ ಮೀಸಲಾತಿಯನ್ನು ಅನುಮತಿಸಬಹುದೇ ಎಂಬ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆ ಕೋರಿತ್ತು.

ಕನಿಷ್ಠ ಆರು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ – ಮೀಸಲಾತಿ ಮೇಲಿನ ಮಿತಿಯನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿವೆ. ಮಹಾರಾಷ್ಟ್ರ ವಿಧಾನಸಭೆ ಅಂಗೀಕರಿಸಿದ ಕಾನೂನು ಸಾಂವಿಧಾನಿಕವಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು.

ಸುಪ್ರೀಂಕೋರ್ಟಿನ ಈ ತೀರ್ಪು, ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಥವಾ ಮೀಸಲಾತಿ ಪರಿಷ್ಕರಣೆ ಮಾಡುವ ಒತ್ತಡದಲ್ಲಿರುವ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ ರಾಜ್ಯಗಳ ಸರ್ಕಾರಗಳಿಗೆ ಹೊಸ ಸವಾಲನ್ನು ಒಡ್ಡಿದೆ.

ಇದನ್ನೂ ಓದಿ: ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...