Homeಮುಖಪುಟಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿತ್ತು.

- Advertisement -
- Advertisement -

ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮರಾಠಾ ಮೀಸಲಾತಿಯನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇದನ್ನು ಅಸಂವಿಧಾನಿಕ ಎಂದು ಬುಧವಾರ ಹೇಳಿದೆ. ಶೇ. 50 ರ ಗರಿಷ್ಠ ಮಿತಿಯನ್ನು ಮತ್ತೆ ಪರಿಶೀಲಿಸುವ ಅಗತ್ಯ ಇಲ್ಲ ಎಂದೂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು, ಮಹಾರಾಷ್ಟ್ರ ಸರ್ಕಾರವು ಮೀಸಲಾತಿಯ ಶೇ. 50 ರ ಗರಿಷ್ಠ ಮಿತಿಯನ್ನು ಮುರಿಯಲು ಯಾವುದೇ ಅಸಾಮಾನ್ಯ ಸನ್ನಿವೇಶಗಳಿಲ್ಲ ಎಂದು ಹೇಳಿದೆ.

ರಾಜ್ಯದಲ್ಲಿ ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ 2018 ರ ಕ್ರಮವನ್ನು ಸುಪ್ರೀಂಕೋರ್ಟ್ ಬುಧವಾರ ರದ್ದುಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ: ಮೀಸಲಾತಿ: ತುಷ್ಟೀಕರಣದ ತಂತ್ರವಾಗುತ್ತಿರುವ ಸಮಾನತೆಯ ಅಸ್ತ್ರ: ಎ ನಾರಾಯಣ

ಸಮುದಾಯವೊಂದಕ್ಕೆ ಪ್ರತ್ಯೇಕ ಮೀಸಲಾತಿ ನೀಡುವ ಕ್ರಮವನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ ಎಂದು ಪಿಟಿಐ ತಿಳಿಸಿದೆ.

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ಹೋರಾಟ ಇನ್ನೂ ಚಾಲನೆಲ್ಲಿದೆ. ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದೆ. ಇದನ್ನು ಸಾಧಿಸಲು ಶೇ. 50 ರ ಗರಿಷ್ಠ ಮಿತಿಯನ್ನು ಉಲ್ಲಂಘಿಸಬೇಕಾಗುತ್ತದೆ. ನ್ಯಾಯಾಲಯಗಳ ಈ ನಿರ್ಬಂಧನೆಯಿಂದ ಪಾರಾಗಲು ಸಂಸತ್ತಿನ ಅನುಮೋದನೆ ಪಡೆಯಬೇಕಾಗುತ್ತದೆ. ಈ ಹಿಂದೆ ಈ ಸಾಹಸ ಮಾಡಿ ಯಶಸ್ವಿಯಾದ ತಮಿಳುನಾಡು ಅಲ್ಲಿ ಶೇ.69 ಪ್ರಮಾಣದ ಮೀಸಲಾತಿ ನಿಗದಿ ಮಾಡಿದೆ.

ದೇಶದ ಜನಸಂಖ್ಯೆಯ ಶೇ. 24 ರಷ್ಟಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಈಗ ಶೇ. 18 ಮೀಸಲಾತಿ ಸಿಗುತ್ತಿದೆ. ಈ ಸಮುದಾಯಗಳಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ಇತರೆ ಹಿಂದುಳಿದ ವರ್ಗದ (ಒಬಿಸಿ) ಸಮುದಾಯಗಳಿಗೂ ನ್ಯಾಯಯುತ ಪಾಲು ಸಿಕ್ಕಿಲ್ಲ ಎಂದು ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ಪ್ರಗತಿಪರ ಸಂಘಟನೆಗಳ ನಾಯಕರು ಆಕ್ಷೇಪ ಎತ್ತುತ್ತಲೇ ಬಂದಿದ್ದಾರೆ.

ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಶೇ. 50 ರಷ್ಟು ಮೀಸಲಾತಿ ಅಂದರೆ, ಸಾಪೇಕ್ಷವಾಗಿ ಅಲ್ಪಸಂಖ್ಯಾತರಾದ (ಜನಸಂಖ್ಯೆಯಲ್ಲಿ ಎಸ್‌ಸಿ-ಎಸ್‌ಟಿ-ಒಬಿಸಿಗಳಿಗಿಂತ ಕಡಿಮೆ ಇರುವ) ಮುಂದುವರೆದ ಮೇಲ್ವರ್ಗ ಮತ್ತು ಮೇಲ್ಜಾತಿಗಳಿಗೆ ಉಳಿದ ಶೇ. 50 ರಷ್ಟು ಮೀಸಲಾತಿ ನೀಡಿದಂತೆ ಆಗುತ್ತದೆ ಎಂಬ ವಾದವೂ ಇದೆ.

ಈ ನಡುವೆ ಕಳೆದ ವರ್ಷ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ಕಲ್ಪಿಸಿದ್ದು, ಶೇ.3 ರಷ್ಟು ಇರುವ ಬ್ರಾಹ್ಮಣರಿಗಷ್ಟೇ ಅನುಕೂಲವಾಗುತ್ತಿದೆ.

ಹೀಗಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬ ವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಸುಪ್ರೀಂಕೋರ್ಟಿನ ನಿನ್ನೆಯ ಆದೇಶ ಕುರಿತು ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
’ಅಸಾಮಾನ್ಯ ಸಂದರ್ಭಗಳಲ್ಲಿ’ ಗರಿಷ್ಠ ಮಿತಿ ದಾಟಬಹುದು ಎಂಬ ಸುಪ್ರೀಂಕೋರ್ಟ್ ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಕೆಲವು ತಜ್ಞರು, ಈ ’ಅಸಾಮಾನ್ಯ ಸಂದರ್ಭ-ಸನ್ನಿವೇಶ’ದ ವ್ಯಾಖ್ಯಾನವೇ ಆಗಿಲ್ಲ ಎನ್ನುತ್ತಾರೆ.

ಕೋರ್ಟ್ ನಿಲುವೇನು?

1992 ರ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಶೇ.50 ಕೋಟಾ ಮಿತಿಯನ್ನು ಉಲ್ಲಂಘಿಸಿದೆ ಎನ್ನಲಾದ ‘ಮಹಾರಾಷ್ಟ್ರ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ-2018’ ಯನ್ನು ಪ್ರಶ್ನಿಸಿದ ಒಂದು ಗುಂಪಿನ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಬುಧವಾರದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್. ನಾಗೇಶ್ವರ ರಾವ್, ಎಸ್. ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಅವರ ಸಂವಿಧಾನ ಪೀಠವು, ಮಹಾರಾಷ್ಟ್ರದಲ್ಲಿ ಹಿಂದಿನ ಭಾರತೀಯ ಜನತಾ ಪಕ್ಷ ಸರ್ಕಾರವು ತಂದಿರುವ ಮೀಸಲಾತಿ ಕ್ರಮವು ಸಮಾನತೆಯ ತತ್ವಗಳನ್ನು ಉಲ್ಲಂಘಿಸಿದೆ ಎಂದು ತಿಳಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

“ಗಾಯಕವಾಡ್ ಆಯೋಗ ಅಥವಾ ಹೈಕೋರ್ಟ್ ಎರಡೂ ಮರಾಠರಿಗೆ 50% ಮೀಸಲಾತಿಯನ್ನು ಮೀರಿದ ಯಾವುದೇ ಪರಿಸ್ಥಿತಿಯನ್ನು ಸೂಚಿಸಿಲ್ಲ” ಎಂದು ಭೂಷಣ್ ನೇತೃತ್ವದ ನ್ಯಾಯಪೀಠ ಸರ್ವಾನುಮತದಿಂದ ಘೋಷಿಸಿತು.

“ಆದ್ದರಿಂದ, ಗರಿಷ್ಠ ಮಿತಿಯನ್ನು ಮೀರಲು ಯಾವುದೇ ಅಸಾಮಾನ್ಯ ಸಂದರ್ಭಗಳಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಪೀಠ ಸ್ಪಷ್ಟಪಡಿಸಿದೆ.

ಈ ತೀರ್ಪು 2020 ರ ಸೆಪ್ಟೆಂಬರ್ 9 ರವರೆಗೆ ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ದಾಖಲಾತಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ಮೀಸಲಾತಿ ಮಿತಿಯನ್ನು ಶೇ.50 ಎಂದು ನಿಗದಿಪಡಿಸಿದ 1992 ರ ಇಂದಿರಾ ಸಾಹ್ನಿ ತೀರ್ಪನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. “ಈ ತೀರ್ಪನ್ನು ಈ ನ್ಯಾಯಾಲಯವು ಪದೇ ಪದೇ ಅನುಸರಿಸುತ್ತಿದೆ ಮತ್ತು ಈ ನ್ಯಾಯಾಲಯದ ಕನಿಷ್ಠ ನಾಲ್ಕು ಸಂವಿಧಾನ ಪೀಠಗಳಿಂದ ಅನುಮೋದನೆ ಪಡೆದಿದೆ” ಎಂದು ಅದು ಹೇಳಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ತೀರ್ಪನ್ನು “ದುರದೃಷ್ಟಕರ” ಎಂದು ಕರೆದಿದ್ದಾರೆ ಎಂದ ಎನ್‌ಐ ವರದಿ ಮಾಡಿದೆ. ಸಮುದಾಯದ ಸದಸ್ಯರಿಗಾಗಿ “ಸ್ವಾಭಿಮಾನದ ಜೀವನ”ದ ಸಲುವಾಗಿ ಸರ್ವಾನುಮತದಿಂದ ಶಾಸನವನ್ನು ಅಂಗೀಕರಿಸಲಾಗಿದೆ ಎಂದು ಠಾಕ್ರೆ ಹೇಳಿದರು. “ಈಗ ಸುಪ್ರೀಂಕೋರ್ಟ್ ಮಹಾರಾಷ್ಟ್ರವು ಈ ಬಗ್ಗೆ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತದೆ, ಪ್ರಧಾನಿ ಮತ್ತು ಅಧ್ಯಕ್ಷರಿಗೆ ಮಾತ್ರ ಸಾಧ್ಯ” ಎಂದು ಅವರು ಹೇಳಿದರು.

2018 ರಲ್ಲಿ, ರಾಜ್ಯವ್ಯಾಪಿ ನಡೆದ ಮರಾಠಾ ಮೀಸಲಾತಿ ಹೋರಾಟದ ಆಗ್ರಹಕ್ಕೆ ಮಣಿದಿದ್ದ ಮಹಾರಾಷ್ಟ್ರದ ಅಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರವು ಮರಾಠರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.18 ಮೀಸಲಾತಿಯನ್ನು ಅನುಮೋದಿಸಿತ್ತು. 2019 ರಲ್ಲಿ ಈ ಕ್ರಮದ ವಿರುದ್ಧ ಅರ್ಜಿಗಳನ್ನು ವಿಚಾರನಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು, ಆದರೆ ಶೇ.18 ಮೀಸಲಾತಿ ಸಮರ್ಥನೀಯವಲ್ಲ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸುಗಳ ಪ್ರಕಾರ ಕೋಟಾವನ್ನು ಶೇ.12 -13 ಕ್ಕೆ ಇಳಿಸುವಂತೆ ಅದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಹೈಕೋರ್ಟ್‌ನ ತೀರ್ಪನ್ನು ತರುವಾಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅದು 2020 ರ ಸೆಪ್ಟೆಂಬರ್‌ನಲ್ಲಿ ತೀರ್ಪನ್ನು ತಡೆಹಿಡಿಯಿತು. ನಂತರ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನೋಟಿಸ್ ನೀಡಿ, ಶೇ. 50 ರ ಮಿತಿಯನ್ನು ಮೀರಿ ಮೀಸಲಾತಿಯನ್ನು ಅನುಮತಿಸಬಹುದೇ ಎಂಬ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆ ಕೋರಿತ್ತು.

ಕನಿಷ್ಠ ಆರು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ – ಮೀಸಲಾತಿ ಮೇಲಿನ ಮಿತಿಯನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿವೆ. ಮಹಾರಾಷ್ಟ್ರ ವಿಧಾನಸಭೆ ಅಂಗೀಕರಿಸಿದ ಕಾನೂನು ಸಾಂವಿಧಾನಿಕವಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು.

ಸುಪ್ರೀಂಕೋರ್ಟಿನ ಈ ತೀರ್ಪು, ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಥವಾ ಮೀಸಲಾತಿ ಪರಿಷ್ಕರಣೆ ಮಾಡುವ ಒತ್ತಡದಲ್ಲಿರುವ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ ರಾಜ್ಯಗಳ ಸರ್ಕಾರಗಳಿಗೆ ಹೊಸ ಸವಾಲನ್ನು ಒಡ್ಡಿದೆ.

ಇದನ್ನೂ ಓದಿ: ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...