Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...