Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...