Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...