Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...