Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....