Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...