Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...