Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...