Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...