Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...