Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...