Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...