Homeಕರ್ನಾಟಕ5 & 8ನೇ ತರಗತಿ 'ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

5 & 8ನೇ ತರಗತಿ ‘ಬೋರ್ಡ್ ಪರೀಕ್ಷೆ’ ರದ್ದು; ಕರ್ನಾಟಕ ಹೈಕೋರ್ಟ್ ತೀರ್ಪು

- Advertisement -
- Advertisement -

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ಪರಿಚಯಿಸುವುದಾಗಿ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ರಾಜ್ಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅನ್ವಯಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ರೂಪಿಸಲಿದೆ. ಈ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಗೆ ಹೈಕೋರ್ಟ್ ತಡೆ ನೀಡಿದೆ.

ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಮತ್ತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘದಿಂದ ಈ ಸುತ್ತೋಲೆಯನ್ನು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿ, ಸಾರ್ವಜನಿಕ ಶಿಕ್ಷಣ ಆಯುಕ್ತರು ಮತ್ತು ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿದ 12.12.2022, 13.12.2022 ಮತ್ತು 04.01.2023ರ ಸುತ್ತೋಲೆಗಳನ್ನು ರದ್ದುಗೊಳಿಸಿತು.

ಈ ಸುತ್ತೋಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಉದ್ದೇಶಗಳಿಗೆ ವಿರುದ್ಧವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

“ಇಂತಹ ಸುತ್ತೋಲೆಗಳು ಕೇವಲ ಕಾಯಿದೆ ಅಥವಾ ನಿಯಮಗಳಿಗೆ ಪೂರಕವಾಗಬಹುದು. ಆದರೆ ಯಾವುದೇ ಸಂದರ್ಭದಲ್ಲಾದರೂ ನಿಯಮಗಳನ್ನು ಬದಲಿಸಲು ಸಾಧ್ಯವಿಲ್ಲ. ಇಂತಹ ಸುತ್ತೋಲೆಗಳನ್ನು ಹೊರಡಿಸಿದ ಸಂದರ್ಭಗಳಲ್ಲಿ ಕಾಯಿದೆಯ ಸೆಕ್ಷನ್ 38 (4) ಅಡಿಯಲ್ಲಿ ಪರಿಗಣಿಸಿದಂತೆ ನಿಗದಿತ ಕಾರ್ಯವಿಧಾನಗಳು ಮತ್ತು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸುತ್ತೋಲೆಗಳನ್ನು ರದ್ದುಗೊಳಿಸಿದ ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮೌಲ್ಯಮಾಪನ ವಿಧಾನವು ಹೊಸ ಸ್ವರೂಪವಾಗಿದೆ” ಎಂದಿದ್ದು, “ರಿಟ್ ಅರ್ಜಿಗಳನ್ನು ಅನುಮತಿಸಿದೆ”.

“ರಾಜ್ಯ ಸರ್ಕಾರವು ಕಾರ್ಯವಿಧಾನವನ್ನು ಅನುಸರಿಸಿಲ್ಲ. ಸುತ್ತೋಲೆಗಳನ್ನು ಹೊರಡಿಸುವ ಮೊದಲು ರಾಜ್ಯ ಶಾಸಕಾಂಗಗಳ ಮುಂದೆ ಸಮಸ್ಯೆಯನ್ನು ಚರ್ಚಿಸಿಲ್ಲ” ಎಂದು ಹೈಕೋರ್ಟ್ ಹೇಳಿದೆ.

“ರಾಜ್ಯ ಸರ್ಕಾರವು ಆರ್‌ಟಿಇ ಕಾಯಿದೆಯ ಅಡಿಯಲ್ಲಿ ಕೆಲವು ಮೌಲ್ಯಮಾಪನ ಕಾರ್ಯವಿಧಾನಗಳನ್ನು ಸೂಚಿಸಲು ಸುತ್ತೋಲೆಯನ್ನು ಹೊರಡಿಸಿದೆ. ನಿಯಮಗಳು ಮತ್ತು ನಿಬಂಧನೆಗಳನ್ನು ಮಾಡಲು, ಕಾಯಿದೆಯ ನಿಬಂಧನೆಗಳನ್ವಯ ಕ್ರಮ ಕೈಗೊಳ್ಳುವ ಸರ್ಕಾರ ಅಧಿಕಾರವನ್ನು ಹೊಂದಿದೆ. ಹಾಗೆ ಮಾಡುವಾಗ ಅದು ಅಗತ್ಯವಾಗಿ ಕಾಯಿದೆಯ ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಬೇಕು. ಕಾಯಿದೆಯ ಸೆಕ್ಷನ್ 38(4)ರ ಪ್ರಕಾರ ನಿಯಮ ಅಥವಾ ಅಧಿಸೂಚನೆಯನ್ನು ರಾಜ್ಯ ಶಾಸಕಾಂಗಗಳ ಮುಂದೆ ಮಂಡಿಸಿದ ನಂತರ ಹೊರಡಿಸಬೇಕು” ಎಂದು ಕೋರ್ಟ್ ಗಮನಿಸಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ರಾಜ್ಯ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್, “ಸರ್ಕಾರವು ಯಾವುದೇ ನಿಯಮ ಅಥವಾ ಅಧಿಸೂಚನೆಯನ್ನು ಹೊರಡಿಸುತ್ತಿಲ್ಲ. ರಾಜ್ಯ ಪಠ್ಯಕ್ರಮದ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೆಲವು ಮೌಲ್ಯಮಾಪನಗಳನ್ನು ಮಾತ್ರ ರೂಪಿಸುತ್ತಿದೆ. ಆದ್ದರಿಂದ ಕಾಯಿದೆಯ ಪ್ರಕ್ರಿಯೆ ಮತ್ತು ಕಾರ್ಯವಿಧಾನವನ್ನು ಅನುಸರಿಸುವ ಪ್ರಶ್ನೆಯೇ ಬರುವುದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ ಸೆಕ್ಷನ್ 38 ಅಥವಾ ಕಾಯಿದೆಯ ಯಾವುದೇ ಇತರ ನಿಬಂಧನೆಗಳು ಇದಕ್ಕೆ ಅನ್ವಯಿಸುವುದಿಲ್ಲ” ಎಂದು ವಾದಿಸಿದರು.

ಆದಾಗ್ಯೂ, ಅಂತಹ ವಾದಗಳು ದೋಷಪೂರಿತವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಆದರೆ ಸುತ್ತೋಲೆಗಳ ಹಿಂದಿನ ಉದ್ದೇಶವನ್ನು ತೀರ್ಪಿನಲ್ಲಿ ಶ್ಲಾಘಿಸಲಾಗಿದೆ. “ರಾಜ್ಯ ಸರ್ಕಾರದ ಆದೇಶದ ಉದ್ದೇಶವು ಶ್ಲಾಘನೀಯ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವಾಗ, ಒಂದನೇ ತರಗತಿಯಿಂದ 9 ನೇ ತರಗತಿಯವರೆಗೆ ಶಾಲಾ ಮಕ್ಕಳ ಮೌಲ್ಯಮಾಪನ ಕಾರ್ಯವಿಧಾನವನ್ನು ತರುವುದು ಅವಶ್ಯಕ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿದ ರೀತಿ ಅನುಚಿತವಾಗಿ ಕಂಡು ಬಂದಿದೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...