Homeಮುಖಪುಟಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ:...

ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಸೆ.14 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರುವ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದು ಮಾಡಿರುವುದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ  ವ್ಯಂಗ್ಯವಾಡಿದ್ದಾರೆ. ಕೊರೊನಾ ಕಾರಣಕ್ಕೆ ಪ್ರಶ್ನೋತ್ತರ ಅವಧಿ ರದ್ದು ಮತ್ತು ಶೂನ್ಯವೇಳೆಯ ಅವಧಿ ಕಡಿಮೆಗೊಳಿಸಿರುವ ಸರ್ಕಾರ, ಜೆಇಇ ಮತ್ತು ನೀಟ್ ಪರೀಕ್ಷೆಗಳಲ್ಲಿ ಉತ್ತರಗಳನ್ನು ನೀಡುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ಕೊರೊನಾ ಕಾರಣ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳು ಮತ್ತು ಆರು ರಾಜ್ಯಗಳ ಮುಖ್ಯಮಂತ್ರಿಗಳು ಸುಪ್ರೀಂಕೋರ್ಟ್‌‌ಗೆ 2 ಬಾರಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ 2 ಬಾರಿಯೂ ಅವರ ಮನವಿಯನ್ನು ತಿರಸ್ಕರಿಸಿತ್ತು. ಹಾಗಾಗಿ ಈಗ ಮಾತ್ರ ಕೊರೊನಾ ಭಯದ ಕಾರಣ ಹೇಳಿ ಸಂಸತ್‌ನಲ್ಲಿ ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಒವೈಸಿ, ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಜೆಇಇ ಪರೀಕ್ಷೆಗಳು ಆರಂಭವಾಗಿದ್ದು, ಸೆಪ್ಟಂಬರ್ 14 ರಂದು ನೀಟ್ ಪರೀಕ್ಷೆ ನಡೆಯಲಿದೆ.

ಪ್ರಶ್ನೋತ್ತರ ವೇಳೆಯನ್ನು ರದ್ದು ಮಾಡಿರುವುದರಿಂದ ನಾವು ಸಂಸತ್ತಿನಲ್ಲಿ ಕೋವಿಡ್ ಸಂಬಂಧದ ಪ್ರಶ್ನೆಗಳು ಮತ್ತು ಪೂರ್ವ ಲಡಾಖ್‌ನಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಚರ್ಚೆ ನಡೆಸಬಹುದೇ ಎಂದು ತಿಳಿದಿಲ್ಲ. ಬಹುಮತ ಹೊಂದಿರುವ ಸರ್ಕಾರ ಸುಗ್ರೀವಾಜ್ಞೆಗಳನ್ನು ತಂದು ಕಾನೂನುಗಳನ್ನು ಮಾಡಬಹುದು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ಮುಂದುವರಿದು, ಹಲವಾರು ದೇಶಗಳ ಪ್ರಧಾನ ಮಂತ್ರಿಗಳು ಕೊರೊನಾವೈರಸ್ ಸಂಬಂಧಿತ ವಿಷಯಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪ್ರಧಾನಿ ಮೋದಿ ಕೇವಲ ವೀಡಿಯೊ ಸಂದೇಶಗಳನ್ನು ಮಾತ್ರ ಹೊರಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...